ಮಂಡ್ಯ: ಶ್ರೀರಂಗಪಟ್ಟಣ ದಸರಾಗೆಂದು ಮೈಸೂರಿನಿಂದ ತೆರಳಿದ್ದ ಕುಮ್ಕಿ ಆನೆ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಲಿದ್ದಾರೆ.
ಶ್ರೀರಂಗಪಟ್ಟಣ ದಸರಾದಲ್ಲಿ ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿವೆ.
ಇಂದು ಇದ್ದಕ್ಕಿದ್ದಂತೆ ಕುಮ್ಕಿ ಆನೆಯಾದ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿದ್ದು, ಜನರನ್ನು ಭಯಭೀತರನ್ನಾಗಿಸಿತ್ತು. ಕೆಲಕಾಲ ದಿಕ್ಕಾಪಾಲಾಗಿ ಓಡಿದ ಲಕ್ಷ್ಮಿ ಆನೆಯನ್ನು ಶಾಂತಳನ್ನಾಗಿಸಲು ಮಾವುತರು ಹರಸಾಹಸ ಪಡುವಂತಾಯಿತು. ಬಳಿಕ ಮಾವುತರು ತಮ್ಮ ಸಮಯ ಪ್ರಜ್ಞೆಯಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದರು.
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…