ಮಂಡ್ಯ

ತಂಬಾಕು ಮುಕ್ತ ಯುವ ಅಭಿಯಾನ 2.0 ಗೆ ಡಿಸಿ ಡಾ ಕುಮಾರ ಚಾಲನೆ

ಮಂಡ್ಯ: ಜಿಲ್ಲೆಯಾದ್ಯಂತ ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸಲು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ ಆ ಮೂಲಕ ಉತ್ತಮ ಯುವಜನರನ್ನು ಕಾಣುವ ಉದ್ದೇಶದಿಂದ ದೇಶದಾದ್ಯಂತ 24 ಸೆಪ್ಟೆಂಬರ್ 2024 ರಿಂದ 23 ನವೆಂಬರ್ 24ರ ವರೆಗೆ 60 ದಿನಗಳ ಕಾಲ ಹಮ್ಮಿಕೊಂಡಿರುವ ತಂಬಾಕು ಮುಕ್ತ ಯುವ 2.0 ಅಭಿಯಾನವನ್ನು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಚಾಲನೆ ನೀಡಿದರು.

ತಂಬಾಕು ಮುಕ್ತ ಯುವ 2.0 ಅಭಿಯಾನದ ಬಗ್ಗೆ ಉದ್ದೇಶ ಹಾಗೂ ಕ್ರಮಗಳು

ತಂಬಾಕು ಮುಕ್ತ ಯುವ 2.0 ಅಭಿಯಾನದ ಅವಧಿಯಲ್ಲಿ ರಾಜ್ಯದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಪಂಚಾಯತ್ ರಾಜ್ ಇಲಾಖೆಯಿಂದ ಕನಿಷ್ಟ 20 ಗ್ರಾಮಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಮೂಲಕ ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲು ಕ್ರಮ ಕೈಗೊಳ್ಳವುದು.

ಆರಕ್ಷಕ ಇಲಾಖೆಯಿಂದ ಪ್ರತಿ ಠಾಣೆಯಿಂದ ಪ್ರತಿವಾರ ಕನಿಷ್ಠ ಎರಡು ಬಾರಿ ಕೋಟ್ಪಾ ಕಾರ್ಯಚರಣೆ ನಡೆಸಿ ಸೆಕ್ಷನ್ 4,5,6ಎ, 6ಬಿ, 7,8,9 ಅಡಿಯಲ್ಲಿ ಪ್ರಕರಣ ದಾಖಲಿಸಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.

ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಶೇಕಡ ನೂರರಷ್ಟು ತಂಬಾಕು ಮುಕ್ತಗೊಳಿಸಲು ಆ ಮೂಲಕ ತಂಬಾಕು ಮುಕ್ತ ಯುವಜನರನ್ನು ನಾಡಿಗೆ ನೀಡಲು ಸೂಚಿಸುತ್ತಾ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮಕ್ಕಳಿಗೆ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ಅರಿವು ಮೂಡಿಸುವುದು.

ವಿವಿಧ ಇಲಾಖೆಗಳು ಕಾರ್ಯಕ್ರಮ ಕೈಗೊಂಡು ವಿದ್ಯಾರ್ಥಿಗಳನ್ನು ಹಾಗೂ ಯುವ ಜನರನ್ನು ತಂಬಾಕು ಮುಕ್ತ ಜೀವನ ನಡೆಸಲು ಪ್ರೇರೇಪಿಸುವುದು.

ನಗರಾಭಿವೃದ್ಧಿ ಇಲಾಖೆ ವತಿಯಿಂದ ತಂಬಾಕು ಮಾರಾಟ ಪರವಾನಗಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ನೂತನ ನಿಯಮಾವಳಿಗಳನ್ನು ಜಾರಿಗೊಳಿಸಿ ತಂಬಾಕು ಮಾರಾಟ ಪರವಾನಿಗೆಯನ್ನು ಆರಂಭಿಸುವುದು.

ನಗರಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಸವಿಲೇವಾರಿ ವಾಹನಗಳ ಮೂಲಕ ಪ್ರತಿನಿತ್ಯ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆಯೂ ಕೂಡ ಜಿಂಗಲ್ಸ್ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು.

ಜಿಲ್ಲೆಯ ಹೆಮ್ಮೆಯ ಶ್ರೀರಂಗಪಟ್ಟಣ ದಸರಾ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ತಂಬಾಕು ಮುಕ್ತ ಕಾರ್ಯಕ್ರಮವನ್ನಾಗಿಸಲು ಆ ಮೂಲಕ ಮಂಡ್ಯ ಜಿಲ್ಲೆಯನ್ನು ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ದೇಶಕ್ಕೆ ಮಾದರಿಯನ್ನಾಗಿಸಲು ಜಿಲ್ಲೆಯ ನಾಗರೀಕರು ಜಿಲ್ಲಾಡಳಿತದೊಡನೆ ಕೈಜೋಡಿಸಬೇಕು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮೋಹನ್ ಕೆ, ಜಿಲ್ಲಾ ಅಬಕಾರಿ ಉಪಯುಕ್ತರು, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಾದ ಡಾ.ಕುಮಾರ್.ಹೆಚ್, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸೋಮಶೇಖರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್ ಶಿವರಾಮೇಗೌಡ, ಜಿಲ್ಲೆಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಮರಿಗೌಡ ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

6 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

14 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

14 hours ago