ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ
ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು.
ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಅವರು ಭರವಸೆ ನೀಡಿದರು.
ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…