ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ
ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು.
ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಅವರು ಭರವಸೆ ನೀಡಿದರು.
ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…