ಮಂಡ್ಯ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಡಿವೈಡರ್‌ಗೆ ವಾಹನ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

11 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

12 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

12 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

13 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

13 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

15 hours ago