ಮಂಡ್ಯ

ಡಿಸಿಎಂ ಡಿಕೆಶಿ ಯಾವ ಸಂದರ್ಭದಲ್ಲಾದರೂ ಸಿಎಂ ಆಗಬಹುದು: ಶಾಸಕ ರವಿ ಗಣಿಗ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭ ಬಂದೇ ಬರುತ್ತದೆ. ಈ ಅವಧಿಯಲ್ಲೇ ಕನಸು ಈಡೇರಲಿದೆಯೇ ಅಥವಾ ಮುಂದಿನ ಅವಧಿವರೆಗೂ ಕಾಯಬೇಕೆ ಎಂಬ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸುತ್ತದೆ. ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳನ್ನು ವರಿಷ್ಠ ನಾಯಕರು ಶೀಘ್ರವೇ ಬಗೆಹರಿಸಬೇಕು ಎಂದು ಒತ್ತಾಯಿಸಿದ ಅವರು, ಬಿಜೆಪಿಯಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿಯವರನ್ನು ಬದಲಾಯಿಸಿದ್ದಾರೆ. ಅಲ್ಲೆಲ್ಲಾ ಗೊಂದಲಗಳಿವೆ. ನಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.

ಕೆಲವು ಹಿರಿಯ ಶಾಸಕರು ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಿ ಮತ್ತು ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ, ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಇಲ್ಲ ಎಂದು ಯಾರೂ ಮಾತನಾಡಿಲ್ಲ. ಕೆಲವರು ಸಚಿವರು ಒಟ್ಟಿಗೆ ಸೇರಿ ಊಟ ಮಾಡಿದರೆ, ಅದನ್ನು ಸಿದ್ದರಾಮಯ್ಯ ಅವರ ಬಣ ಎನ್ನಲಾಗುತ್ತಿದೆ. ನಾವು ನಮ್ಮದೇ ಕೆಲಸಕ್ಕೆ ದೆಹಲಿಗೆ ಹೋದರೆ ಡಿ.ಕೆ.ಶಿವಕುಮಾರ್ ಬಣ ಎನ್ನುತ್ತಾರೆ. ಇದೆಲ್ಲ ಮಾಧ್ಯಮಗಳು ಸೃಷ್ಟಿಸುತ್ತಿರುವ ಅನಗತ್ಯ ಗೊಂದಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಶೋಷಿತ ವರ್ಗಗಳು ಸುಮ್ಮನಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ನಾಯಕ ರಾಮಚಂದ್ರಪ್ಪ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಅವರು ಕಾಲಕಾಲಕ್ಕೆ ಇಂಥ ಮಾತುಗಳನ್ನು ಆಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಒಕ್ಕಲಿಗ ಸಮುದಾಯ ಬೆಂಬಲ ನೀಡಿದ್ದಕ್ಕಾಗಿಯೇ ಮಂಡ್ಯ ಜಿಲ್ಲೆಯಲ್ಲಿ ಆರು ಮಂದಿ ಶಾಸಕರು ಗೆದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ಅದನ್ನು ತಪ್ಪು ಎಂದು ಪ್ರತ್ಯುತ್ತರಿಸುವ ಅಗತ್ಯವಿಲ್ಲ ಎಂದರು.

ಸಚಿವ ಸತೀಶ್ ಜಾರಕಿಹೊಳಿಯವರು ನಾನು ಸಿದ್ದರಾಮಯ್ಯ ಬಣ ಎಂದು ಹೇಳಿಲ್ಲ. ನಾನು ಡಿ.ಕೆ.ಶಿವಕುಮಾರ್ ಬಣ ಎಂದು ತಿಳಿಸಿಲ್ಲ. 140 ಮಂದಿ ಶಾಸಕರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣದಲ್ಲೇ ಇದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಆರಂಭದಿಂದಲೂ ಹೇಳುತ್ತಲೇ ಇದ್ದೇವೆ. ದೇವರ ಇಚ್ಛೆಯಲ್ಲಿ ಯಾವಾಗ ಆಗಬೇಕು ಎಂದಿದೆಯೋ ಆಗ ಆಗುತ್ತದೆ. ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಬಯಕೆ. ಹಾಗೆಂದು ಉತ್ತಮವಾಗಿ ಕೆಲಸ ಮಾಡುತ್ತಿರುವ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಹಾಗೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

8 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

10 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

12 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

14 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

17 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

17 hours ago