ಮಂಡ್ಯ

ಡಿಸಿಎಂ ಡಿಕೆಶಿ ಯಾವ ಸಂದರ್ಭದಲ್ಲಾದರೂ ಸಿಎಂ ಆಗಬಹುದು: ಶಾಸಕ ರವಿ ಗಣಿಗ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭ ಬಂದೇ ಬರುತ್ತದೆ. ಈ ಅವಧಿಯಲ್ಲೇ ಕನಸು ಈಡೇರಲಿದೆಯೇ ಅಥವಾ ಮುಂದಿನ ಅವಧಿವರೆಗೂ ಕಾಯಬೇಕೆ ಎಂಬ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸುತ್ತದೆ. ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳನ್ನು ವರಿಷ್ಠ ನಾಯಕರು ಶೀಘ್ರವೇ ಬಗೆಹರಿಸಬೇಕು ಎಂದು ಒತ್ತಾಯಿಸಿದ ಅವರು, ಬಿಜೆಪಿಯಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿಯವರನ್ನು ಬದಲಾಯಿಸಿದ್ದಾರೆ. ಅಲ್ಲೆಲ್ಲಾ ಗೊಂದಲಗಳಿವೆ. ನಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.

ಕೆಲವು ಹಿರಿಯ ಶಾಸಕರು ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಿ ಮತ್ತು ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ, ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಇಲ್ಲ ಎಂದು ಯಾರೂ ಮಾತನಾಡಿಲ್ಲ. ಕೆಲವರು ಸಚಿವರು ಒಟ್ಟಿಗೆ ಸೇರಿ ಊಟ ಮಾಡಿದರೆ, ಅದನ್ನು ಸಿದ್ದರಾಮಯ್ಯ ಅವರ ಬಣ ಎನ್ನಲಾಗುತ್ತಿದೆ. ನಾವು ನಮ್ಮದೇ ಕೆಲಸಕ್ಕೆ ದೆಹಲಿಗೆ ಹೋದರೆ ಡಿ.ಕೆ.ಶಿವಕುಮಾರ್ ಬಣ ಎನ್ನುತ್ತಾರೆ. ಇದೆಲ್ಲ ಮಾಧ್ಯಮಗಳು ಸೃಷ್ಟಿಸುತ್ತಿರುವ ಅನಗತ್ಯ ಗೊಂದಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಶೋಷಿತ ವರ್ಗಗಳು ಸುಮ್ಮನಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ನಾಯಕ ರಾಮಚಂದ್ರಪ್ಪ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಅವರು ಕಾಲಕಾಲಕ್ಕೆ ಇಂಥ ಮಾತುಗಳನ್ನು ಆಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಒಕ್ಕಲಿಗ ಸಮುದಾಯ ಬೆಂಬಲ ನೀಡಿದ್ದಕ್ಕಾಗಿಯೇ ಮಂಡ್ಯ ಜಿಲ್ಲೆಯಲ್ಲಿ ಆರು ಮಂದಿ ಶಾಸಕರು ಗೆದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ಅದನ್ನು ತಪ್ಪು ಎಂದು ಪ್ರತ್ಯುತ್ತರಿಸುವ ಅಗತ್ಯವಿಲ್ಲ ಎಂದರು.

ಸಚಿವ ಸತೀಶ್ ಜಾರಕಿಹೊಳಿಯವರು ನಾನು ಸಿದ್ದರಾಮಯ್ಯ ಬಣ ಎಂದು ಹೇಳಿಲ್ಲ. ನಾನು ಡಿ.ಕೆ.ಶಿವಕುಮಾರ್ ಬಣ ಎಂದು ತಿಳಿಸಿಲ್ಲ. 140 ಮಂದಿ ಶಾಸಕರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣದಲ್ಲೇ ಇದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಆರಂಭದಿಂದಲೂ ಹೇಳುತ್ತಲೇ ಇದ್ದೇವೆ. ದೇವರ ಇಚ್ಛೆಯಲ್ಲಿ ಯಾವಾಗ ಆಗಬೇಕು ಎಂದಿದೆಯೋ ಆಗ ಆಗುತ್ತದೆ. ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಬಯಕೆ. ಹಾಗೆಂದು ಉತ್ತಮವಾಗಿ ಕೆಲಸ ಮಾಡುತ್ತಿರುವ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಹಾಗೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago