ಮಂಡ್ಯ

ಡಿಸಿಎಂ ಮಂಡ್ಯ ಜಿಲ್ಲೆಯ ಜನರ ಕ್ಷಮೆ ಕೇಳಲೆಬೇಕು: ಚಂದ್ರಶೇಖರ್

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ಸದಸ್ಯ ಇಂಡುವಾಳು ಚಂದ್ರಶೇಖರ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ‍್ಯ ಪೂರ್ವದಿಂದಲೂ ಜಿಲ್ಲೆಯ ಜನರು ಸ್ವಾತಂತ್ರ‍್ಯ ಚಳುವಳಿಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಮುಖ ನೀರಾವರಿ ಚಳುವಳಿಗಳಲ್ಲಿ ಹಾಗೆಯೇ ರಾಷ್ಟ್ರ ರಾಜಕಾರಣದಲ್ಲೂ ಭಾಗವಹಿಸಿ ಹೆಸರು ಮಾಡಿದ್ದಾರೆ. ಇಂತಹ ಜಿಲ್ಲೆಯ ಜನಗಳನ್ನು ಛತ್ರಿಗಳು ಎಂದಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಜಿಲ್ಲೆಯನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕರು ಈ ಬಗ್ಗೆ ಒಂದು ಮಾತನ್ನು ಆಡದಿರುವುದು ವಿಪರ್ಯಾಸ. ಶಿವಕುಮಾರ ಅವರಿಗೆ ಈ ಬಗ್ಗೆ ತಿಳಿಸಿ ಸ್ಪಷ್ಟನೆ ನೀಡುವ ಕೆಲಸವನ್ನು ಸಹ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೋಮವಾರದೊಳಗೆ ಕ್ಷಮೆ ಕೇಳದಿದ್ದರೆ ಜಿಲ್ಲೆಗೆ ಬಂದರೆ ಕಪ್ಪು ಬಾವುಟ ಪ್ರದರ್ಶಿಸಿ ಬಹಿಷ್ಕಾರ ಹಾಕಲಾಗುವುದು ಎಂದು ಎಚ್ಚರಿಸಿದರು.

ಮಾರ್ಚ್ 25 ಕ್ಕೆ ಛತ್ರಿ ಮೆರವಣಿಗೆ

ಇದೇ ಮಾ.24 ರ ಸೋಮವಾರ ಸಂಜೆಯೊಳಗೆ ಕ್ಷಮಾಪಣೆ ಕೇಳದಿದ್ದರೆ ಮಾರ್ಚ್ 25ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಸಂಜಯ ಸರ್ಕಲ್‌ವರೆಗೆ ಛತ್ರಿಗಳನ್ನು ಹಿಡಿದು ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು, ರೈತರು, ಸಂಘ-ಸಂಸ್ಥೆಗಳ ಮುಖಂಡರು ಛತ್ರಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಶಿವಳ್ಳಿ ಚಂದ್ರು, ಶಂಭೂನಹಳ್ಳಿ ಸುರೇಶ, ಬೋರಲಿಂಗೇಗೌಡ ಪಣಕನಹಳ್ಳಿ, ಹಲ್ಲೆಗೆರೆ ಶಿವರಾಂ, ಹೊಳಲು ಸಂತೋಷ್,ಇಂಡುವಾಳು ಸಿದ್ದೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago