ಮಂಡ್ಯ: ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ಮನೆಯಿಂದ ಹೊರಟ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ತಲುಪಿತು.
ಇಲ್ಲಿ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಂಘ-ಸಂಸ್ಥೆ, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕ ಅಂತಿಮ ದರ್ಶನ ಪಡೆದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಸ್ವಾಮೀಜಿಗಳು ಭಾಗಿಯಾಗಿ ಅಂತಿಮ ದರ್ಶನ ಪಡೆದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆಯೂ ಕ್ರಮಗಳನ್ನು ಕೈಗೊಂಡಿತ್ತು.
ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.
ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ ಸುಮಾರು 2.30 ಗಂಟೆಗೆ ನಿಧನರಾಗಿದ್ದು, ಇಂದು(ಡಿ.11) ಅವರ ಹುಟ್ಟೂರಾಗಿರುವ ಸೋಮನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ. ಅಲ್ಲದೇ ಮೃತರ ಅಂತ್ಯ ಸಂಸ್ಕಾರವನ್ನು ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಸುಮಾರು 1,000 ಕೆ.ಜಿ.ಯಷ್ಟು ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯಿಂದ ಪೂರೈಕೆ ಮಾಡಲಾಗಿದೆ. ಬಳಿಕ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…