ಮಂಡ್ಯ

ಸಾಲಭಾದೆ : ರೈತ ಆತ್ಮಹತ್ಯೆ

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಮೃತರಿಗೆ ಪತ್ನಿ ರತ್ನಮ್ಮ, ಪುತ್ರಿ ಅರ್ಪಿತಾ ಹಾಗೂ ಪುತ್ರ ಪುನೀತ್ ಇದ್ದಾರೆ.

ತಮ್ಮ ಆರು ಮಂದಿ ಸಹೋದರರಲ್ಲಿ ನಾಲ್ಕನೆಯವರಾದ ಗೋವಿಂದ ಅವರು ಒಟ್ಟು ಕುಟುಂಬದ 10 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಇತ್ತೀಚೆಗೆ ಪುತ್ರಿಯ ಮದುವೆ ಕೂಡ ನಿಶ್ಚಯವಾಗಿ 8 ಲಕ್ಷ ರೂ.ಸಾಲ ಮಾಡಿಕೊಂಡಿದ್ದರಲ್ಲದೆ, ಮೈಕ್ರೋ ಫೈನಾನ್ಸ್, ಕೈ ಸಾಲ, ಬ್ಯಾಂಕ್‌ಸಾಲ ಸೇರಿ ಸುಮಾರು 22 ಲಕ್ಷ ರೂ. ಸಾಲದ ಹೊರೆಯಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:-ಬನ್ನೀರುಘಟ್ಟ : ಸಫಾರಿ ವೇಳೆ ಚಿರತೆ ದಾಳಿ ; ಮಹಿಳೆ ಗಂಭೀರ

ಇದರೊಂದಿಗೆ 1 ಎಕರೆ 6 ಗುಂಟೆ ಜಾಗದಲ್ಲಿ ಟೊಮ್ಯಾಟೊ ಬೆಳೆ ಬೆಳಿದಿದ್ದ ಗೋವಿಂದ ಅವರು ಇದಕ್ಕೂ ಕೈಸಾಲ ಮಾಡಿದ್ದರು ಎನ್ನಲಾಗಿದ್ದು, ಈ ಫಸಲೂ ಬಾರದೆ ಕೈಸುಟ್ಟುಕೊಂಡಿದ್ದರು. ಇದರಿಂದ ಮನನೊಂದು ಬುಧವಾರ ರಾತ್ರಿ ತಮ್ಮ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದರು ಎನ್ನಲಾಗಿದೆ. ಅದೇ ಮಾರ್ಗದಲ್ಲಿ ಬಂದ ಗೋವಿಂದ ಅವರ ಚಿಕ್ಕಪ್ಪ ಕೂಡಲೇ ಗೋವಿಂದ ಕುಟುಂಬದವರಿಗೆ ಮಾಹಿತಿ ತಲುಪಿಸಿದ್ದಾರೆ. ತಕ್ಷಣ ಗೋವಿಂದ ಅವರಿಗೆ ಪಾಂಡವಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 3 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಗೋವಿಂದ ಅವರ ಪುತ್ರ ಪುನೀತ್ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

2 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

16 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

17 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

18 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

18 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

19 hours ago