ಮಂಡ್ಯ

ಸಾಲಭಾದೆ : ರೈತ ಆತ್ಮಹತ್ಯೆ

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಮೃತರಿಗೆ ಪತ್ನಿ ರತ್ನಮ್ಮ, ಪುತ್ರಿ ಅರ್ಪಿತಾ ಹಾಗೂ ಪುತ್ರ ಪುನೀತ್ ಇದ್ದಾರೆ.

ತಮ್ಮ ಆರು ಮಂದಿ ಸಹೋದರರಲ್ಲಿ ನಾಲ್ಕನೆಯವರಾದ ಗೋವಿಂದ ಅವರು ಒಟ್ಟು ಕುಟುಂಬದ 10 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಇತ್ತೀಚೆಗೆ ಪುತ್ರಿಯ ಮದುವೆ ಕೂಡ ನಿಶ್ಚಯವಾಗಿ 8 ಲಕ್ಷ ರೂ.ಸಾಲ ಮಾಡಿಕೊಂಡಿದ್ದರಲ್ಲದೆ, ಮೈಕ್ರೋ ಫೈನಾನ್ಸ್, ಕೈ ಸಾಲ, ಬ್ಯಾಂಕ್‌ಸಾಲ ಸೇರಿ ಸುಮಾರು 22 ಲಕ್ಷ ರೂ. ಸಾಲದ ಹೊರೆಯಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:-ಬನ್ನೀರುಘಟ್ಟ : ಸಫಾರಿ ವೇಳೆ ಚಿರತೆ ದಾಳಿ ; ಮಹಿಳೆ ಗಂಭೀರ

ಇದರೊಂದಿಗೆ 1 ಎಕರೆ 6 ಗುಂಟೆ ಜಾಗದಲ್ಲಿ ಟೊಮ್ಯಾಟೊ ಬೆಳೆ ಬೆಳಿದಿದ್ದ ಗೋವಿಂದ ಅವರು ಇದಕ್ಕೂ ಕೈಸಾಲ ಮಾಡಿದ್ದರು ಎನ್ನಲಾಗಿದ್ದು, ಈ ಫಸಲೂ ಬಾರದೆ ಕೈಸುಟ್ಟುಕೊಂಡಿದ್ದರು. ಇದರಿಂದ ಮನನೊಂದು ಬುಧವಾರ ರಾತ್ರಿ ತಮ್ಮ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದರು ಎನ್ನಲಾಗಿದೆ. ಅದೇ ಮಾರ್ಗದಲ್ಲಿ ಬಂದ ಗೋವಿಂದ ಅವರ ಚಿಕ್ಕಪ್ಪ ಕೂಡಲೇ ಗೋವಿಂದ ಕುಟುಂಬದವರಿಗೆ ಮಾಹಿತಿ ತಲುಪಿಸಿದ್ದಾರೆ. ತಕ್ಷಣ ಗೋವಿಂದ ಅವರಿಗೆ ಪಾಂಡವಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 3 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಗೋವಿಂದ ಅವರ ಪುತ್ರ ಪುನೀತ್ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

57 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

59 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 hour ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 hour ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 hour ago