ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 271 ಕ್ಯಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಜಲಾಶಯದಲ್ಲಿ ಇದೇ ದಿನ 108.74 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯದ ಅಚ್ಚಕಟ್ಟು ಪ್ರದೇಶದಲ್ಲಿ ಬೆಳೆದಿರುವ ಭತ್ತ ಇತರ ಬೆಳೆಗಳಿಗೆ ಕಟ್ಟು ಪದ್ದತಿಯಲ್ಲಿ ನೀರು ಹರಿಸಲಾಗುತ್ತಿದೆ.
‘ಇದೇ ಮಾದರಿಯಲ್ಲಿ ನೀರು ಹರಿಸಿದರೆ ಮೇ ಅಂತ್ಯದವರೆಗೂ ಬೆಳೆಗಳಿಗೆ ನೀರು ಕೊಡಬಹುದು. ಕುಡಿಯುವ ಉದ್ದೇಶಕ್ಕೆ ಜುಲೈ ಅಂತ್ಯದವರೆಗೂ ನೀರು ಸಿಗಲಿದೆ. ಮುಂಗಾರು ಮಳೆ ಬೀಳುವ ಕಾರಣ ನೀರಿಗೆ ಅಭಾವ ಉಂಟಾಗುವುದಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಆನಂದ್ ತಿಳಿಸಿದರು.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…