ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ.
ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ ಮಾಡಿದ್ದಾರೆ. 2006 ರಲ್ಲಿ ಪಾಂಡವಪುರ ಪಟ್ಟಣದಲ್ಲಿ ಒಳಚರಂಡಿ ತ್ಯಾಜ್ಯ ಘಟಕಕ್ಕಾಗಿ ರೈತ ಸತ್ಯನಾರಾಯಣ ಅವರ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಆ ವೇಳೆ ರೈತನಿಗೆ ಕಡಿಮೆ ಮೊತ್ತದ ಪರಿಹಾರ ನೀಡಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಇದರಿಂದ ಹತಾಶೆಗೊಂಡ ರೈತ ಹೆಚ್ಚಿನ ಪರಿಹಾರಕ್ಕೆ ಕೋರ್ಟ್ ಗೆ ಮೊರೆ ಹೋಗಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ 4.89 ಕೋಟಿ ಪರಿಹಾರ ನೀಡಲು ಸೂಚನೆ ನೀಡಿತ್ತು. ಆದೇಶ ನೀಡಿ 2 ವರ್ಷ ಕಳೆದರೂ ಪರಿಹಾರ ಕೊಡದೆ ವಿಳಂಬ ಮಾಡಿದ್ದರಿಂದ ಕೋರ್ಟ್ ನಲ್ಲಿ ರೈತನಿಗೆ ಎಸಿ ಕಚೇರಿ ಸ್ತಿರಾಸ್ತಿ ಜಪ್ತಿ ಮಾಡಿಕೊಡುವಂತೆ ಆದೇಶ ನೀಡಲಾಗಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ರೈತರ ಮುಂದೆ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ಮುಂದಾಗುತ್ತಿದ್ದಂತೆ ಎಸಿ ಸ್ಥಳಕ್ಕೆ ಆಗಮಿಸಿದ್ದು, ರೈತರ ಮನವೊಲಿಸಿ ಶೀಘ್ರ ಪರಿಹಾರದ ಮೊತ್ತ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿಯ ಭರವಸೆ ಮೇರೆಗೆ ರೈತರು ಪೀಠೋಪಕರಣ ಹಿಂತಿರುಗಿಸಿದ್ದಾರೆ.
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…