ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ.
ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ ಮಾಡಿದ್ದಾರೆ. 2006 ರಲ್ಲಿ ಪಾಂಡವಪುರ ಪಟ್ಟಣದಲ್ಲಿ ಒಳಚರಂಡಿ ತ್ಯಾಜ್ಯ ಘಟಕಕ್ಕಾಗಿ ರೈತ ಸತ್ಯನಾರಾಯಣ ಅವರ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಆ ವೇಳೆ ರೈತನಿಗೆ ಕಡಿಮೆ ಮೊತ್ತದ ಪರಿಹಾರ ನೀಡಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಇದರಿಂದ ಹತಾಶೆಗೊಂಡ ರೈತ ಹೆಚ್ಚಿನ ಪರಿಹಾರಕ್ಕೆ ಕೋರ್ಟ್ ಗೆ ಮೊರೆ ಹೋಗಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ 4.89 ಕೋಟಿ ಪರಿಹಾರ ನೀಡಲು ಸೂಚನೆ ನೀಡಿತ್ತು. ಆದೇಶ ನೀಡಿ 2 ವರ್ಷ ಕಳೆದರೂ ಪರಿಹಾರ ಕೊಡದೆ ವಿಳಂಬ ಮಾಡಿದ್ದರಿಂದ ಕೋರ್ಟ್ ನಲ್ಲಿ ರೈತನಿಗೆ ಎಸಿ ಕಚೇರಿ ಸ್ತಿರಾಸ್ತಿ ಜಪ್ತಿ ಮಾಡಿಕೊಡುವಂತೆ ಆದೇಶ ನೀಡಲಾಗಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ರೈತರ ಮುಂದೆ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ಮುಂದಾಗುತ್ತಿದ್ದಂತೆ ಎಸಿ ಸ್ಥಳಕ್ಕೆ ಆಗಮಿಸಿದ್ದು, ರೈತರ ಮನವೊಲಿಸಿ ಶೀಘ್ರ ಪರಿಹಾರದ ಮೊತ್ತ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿಯ ಭರವಸೆ ಮೇರೆಗೆ ರೈತರು ಪೀಠೋಪಕರಣ ಹಿಂತಿರುಗಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…