ಮಂಡ್ಯ

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಲ್ ಜಲ್ ಮಿತ್ರ ಯೋಜನೆಯಡಿ 49 ಜನರು ಆಯ್ಕೆಯಾಗಿದ್ದು 47 ಫಲಾನುಭವಿಗಳು ಉತ್ತೀರ್ಣರಾಗಿರುತ್ತಾರೆ ಸದರಿ 47 ಜನರಿಗೆ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಗಿದೆ ಎಂದರು.

ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೇವಲ ತರಬೇತಿ ಮತ್ತು ಪ್ರಮಾಣ ಪತ್ರ ವಿತರಿಸಿದರೆ ಸಾಲದು. ಅವರಿಗೆ ಬ್ಯಾಂಕ್ ನ ಮೂಲಕ ಸಾಲ ಸೌಲಭ್ಯವನ್ನು ಕಲ್ಪಿಸಿ ಉದ್ಯಮ ಸೃಷ್ಟಿ ಮಾಡಲು ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 19 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. ಅದರಲ್ಲಿ 4290 ಜನರಿಗೆ ಸುಮಾರು 30 ಕೋಟಿ ಸಾಲ ಸೌಲಭ್ಯವನ್ನು ನೀಡಲಾಗಿದೆ. ಪಿ.ಎಂ ವಿಶ್ವಕರ್ಮ ಯೋಜನೆ ಬಡ ಜನರಿಗೆ ಕೌಶಲ್ಯದ ತರಬೇತಿ ನೀಡಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದು. ಅಧಿಕಾರಿಗಳು ಸದರಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಎಂದು ಹೇಳಿದರು.

ಇದನ್ನು ಓದಿ: ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್‌ ಕಾಟ ; ಎಫ್‌ಐಆರ್‌ ದಾಖಲು

ಯುವನಿಧಿ ಪ್ಲಸ್ ಕುರಿತು ಜಾಗೃತಿ ಮೂಡಿಸಿ
ಯುವನಿಧಿ ಪ್ಲಸ್ ಯೋಜನೆಯಡಿ ಜಿಲ್ಲೆಯ 7 ತಾಲ್ಲೂಕಿನಿಂದ 315 ನಿರುದ್ಯೋಗಿಗಳು ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ತರಬೇತಿ ಪಡೆಯಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯ ಕುರಿತು ಕಾಲೇಜುಗಳಲ್ಲಿ ಹೆಚ್ಚಿನ ಮಾಹಿತಿ ಮತ್ತು ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ನಿಧಿ ಪ್ಲಸ್ ನಲ್ಲಿ ಯುವಕರು ತರಬೇತಿ ಪಡೆಯುವಂತೆ ಮಾಡಿ ಎಂದು ತಿಳಿಸಿದರು.

ಪಿ.ಎಂ ಸ್ವ-ನಿಧಿ ಯೋಜನೆ
ಬೀದಿ ಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಪಿ.ಎಂ ಸ್ವ- ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪಿ.ಎಂ ಸ್ವ- ನಿಧಿ ಸಾಹಯ ಧನವನ್ನು ಮೂರು ಹಂತದಲ್ಲಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ರೂ 15 ಸಾವಿರ, ಎರಡನೇ ಹಂತದಲ್ಲಿ ರೂ 25 ಸಾವಿರ, ಮೂರನೇ ಹಂತದಲ್ಲಿ ರೂ 50 ಸಾವಿರ ಹಣವನ್ನು ಶೇ 7 ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು. ಸಾಲವನ್ನು ಸರಿಯಾದ ಸಮಯಕ್ಕೆ ಪಾವತಿಸುವ ಫಲಾನುಭವಿಗಳಿಗೆ ರೂ 30 ಸಾವಿರದ ವರೆಗೂ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳು ಪಿ.ಎಂ ಸ್ವನಿಧಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಯೋಜನೆಯ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಘಟಕಗಳ ಜಂಟಿ ನಿರ್ದೇಶಕ ದಿನೇಶ್, ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೆರೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

13 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

35 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…

2 hours ago