ಮಂಡ್ಯ

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಲ್ ಜಲ್ ಮಿತ್ರ ಯೋಜನೆಯಡಿ 49 ಜನರು ಆಯ್ಕೆಯಾಗಿದ್ದು 47 ಫಲಾನುಭವಿಗಳು ಉತ್ತೀರ್ಣರಾಗಿರುತ್ತಾರೆ ಸದರಿ 47 ಜನರಿಗೆ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಗಿದೆ ಎಂದರು.

ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೇವಲ ತರಬೇತಿ ಮತ್ತು ಪ್ರಮಾಣ ಪತ್ರ ವಿತರಿಸಿದರೆ ಸಾಲದು. ಅವರಿಗೆ ಬ್ಯಾಂಕ್ ನ ಮೂಲಕ ಸಾಲ ಸೌಲಭ್ಯವನ್ನು ಕಲ್ಪಿಸಿ ಉದ್ಯಮ ಸೃಷ್ಟಿ ಮಾಡಲು ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 19 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. ಅದರಲ್ಲಿ 4290 ಜನರಿಗೆ ಸುಮಾರು 30 ಕೋಟಿ ಸಾಲ ಸೌಲಭ್ಯವನ್ನು ನೀಡಲಾಗಿದೆ. ಪಿ.ಎಂ ವಿಶ್ವಕರ್ಮ ಯೋಜನೆ ಬಡ ಜನರಿಗೆ ಕೌಶಲ್ಯದ ತರಬೇತಿ ನೀಡಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದು. ಅಧಿಕಾರಿಗಳು ಸದರಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಎಂದು ಹೇಳಿದರು.

ಇದನ್ನು ಓದಿ: ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್‌ ಕಾಟ ; ಎಫ್‌ಐಆರ್‌ ದಾಖಲು

ಯುವನಿಧಿ ಪ್ಲಸ್ ಕುರಿತು ಜಾಗೃತಿ ಮೂಡಿಸಿ
ಯುವನಿಧಿ ಪ್ಲಸ್ ಯೋಜನೆಯಡಿ ಜಿಲ್ಲೆಯ 7 ತಾಲ್ಲೂಕಿನಿಂದ 315 ನಿರುದ್ಯೋಗಿಗಳು ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ತರಬೇತಿ ಪಡೆಯಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯ ಕುರಿತು ಕಾಲೇಜುಗಳಲ್ಲಿ ಹೆಚ್ಚಿನ ಮಾಹಿತಿ ಮತ್ತು ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ನಿಧಿ ಪ್ಲಸ್ ನಲ್ಲಿ ಯುವಕರು ತರಬೇತಿ ಪಡೆಯುವಂತೆ ಮಾಡಿ ಎಂದು ತಿಳಿಸಿದರು.

ಪಿ.ಎಂ ಸ್ವ-ನಿಧಿ ಯೋಜನೆ
ಬೀದಿ ಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಪಿ.ಎಂ ಸ್ವ- ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪಿ.ಎಂ ಸ್ವ- ನಿಧಿ ಸಾಹಯ ಧನವನ್ನು ಮೂರು ಹಂತದಲ್ಲಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ರೂ 15 ಸಾವಿರ, ಎರಡನೇ ಹಂತದಲ್ಲಿ ರೂ 25 ಸಾವಿರ, ಮೂರನೇ ಹಂತದಲ್ಲಿ ರೂ 50 ಸಾವಿರ ಹಣವನ್ನು ಶೇ 7 ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು. ಸಾಲವನ್ನು ಸರಿಯಾದ ಸಮಯಕ್ಕೆ ಪಾವತಿಸುವ ಫಲಾನುಭವಿಗಳಿಗೆ ರೂ 30 ಸಾವಿರದ ವರೆಗೂ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳು ಪಿ.ಎಂ ಸ್ವನಿಧಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಯೋಜನೆಯ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಘಟಕಗಳ ಜಂಟಿ ನಿರ್ದೇಶಕ ದಿನೇಶ್, ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೆರೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

1 hour ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago