ಮಂಡ್ಯ

ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಿ : ಡಾ.ಕುಮಾರ

ಮಂಡ್ಯ: ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ವಿಕಲಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ. 30000 ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ, ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000 ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000 ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.

ಈ ಎಲ್ಲ ಯೋಜನೆಗಳ ಪ್ರೋತ್ಸಾಹ ಧನ ಪಡೆದಿರುವ ಫಲಾನುಭವಿಗಳು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್‌ ನಂದಿನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

34 mins ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

2 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

3 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

3 hours ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

5 hours ago