ಮಂಡ್ಯ

ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಿ : ಡಾ.ಕುಮಾರ

ಮಂಡ್ಯ: ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ವಿಕಲಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ. 30000 ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ, ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000 ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000 ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.

ಈ ಎಲ್ಲ ಯೋಜನೆಗಳ ಪ್ರೋತ್ಸಾಹ ಧನ ಪಡೆದಿರುವ ಫಲಾನುಭವಿಗಳು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್‌ ನಂದಿನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago