ಮಂಡ್ಯ: ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ವಿಕಲಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ. 30000 ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ, ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000 ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000 ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.
ಈ ಎಲ್ಲ ಯೋಜನೆಗಳ ಪ್ರೋತ್ಸಾಹ ಧನ ಪಡೆದಿರುವ ಫಲಾನುಭವಿಗಳು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…