ಮಂಡ್ಯ

ಟನ್‌ ಕಬ್ಬಿಗೆ 5,000 ರೂ ನೀಡಲು ಸರ್ಕಾರಕ್ಕೆ ಆಗ್ರಹ

ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು.

ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಪ್ರೊ.ನಂಜುಂಡಸ್ವಾಮಿಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಜಯಘೋಷಗಳನ್ನು ಕೂಗಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದರು.

ಆ ದಿನಗಳಲ್ಲಿ ರೈತರು ನವಲಗುಂದ, ನರಗುಂದದಲ್ಲಿ ರೈತ ಬೃಹತ್ ಚಳವಳಿ ನಡೆಯುವಾಗ ಮುಖ್ಯಮಂತ್ರಿ ಗುಂಡುರಾವ್ ಸರ್ಕಾರದಲ್ಲಿ ರೈತರ ಮೇಲೆ ನಡೆಸಿದ ಗುಂಡಿನ ದಾಳಿಗೆ ಸ್ಥಳದಲ್ಲೇ ಇಬ್ಬರು ರೈತರು ಸಾವನ್ನಪ್ಪಿದ ನೆನಪಿಗಾಗಿ ಈ ದಿನವನ್ನು ರೈತ ಹುತಾತ್ಮ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು.

ಪ್ರತಿ ವರ್ಷ ನವಲಗುಂದ, ನರಗುಂದದಲ್ಲೇ ಆಚರಣೆ ಮಾಡುತ್ತಿದ್ದು, ಇಂದು ಹೋರಾಟದ ರೂಪರೇಷೆಗಳು ಬದಲಾವಣೆಯಾಗಿದ್ದು, ಪಟ್ಟಣದ ಪ್ರೊ.ನಂಜುಂಡಸ್ವಾಮಿ ಆವರಣದಲ್ಲಿ ಎಲ್ಲಾ ರೈತರು ಒಟ್ಟುಗೂಡಿ ಆಚರಿಸುತ್ತಿದ್ದೇವೆ ಎಂದರು.

ಜಿಲ್ಲಾ ಉಪಾಧ್ಯಕ್ಷ ರವಿ ಮಾತನಾಡಿ, ದೇವನಹಳ್ಳಿ ಚನ್ನರಾಯಪಟ್ಟಣದ ೧೩ ಹಳ್ಳಿಗಳ ೧,೭೭೭ ಎಕರೆ ಭೂ ಸ್ವಾನ ಕೈ ಬಿಟ್ಟಿರುವುದಕ್ಕೆ ಈ ಸರ್ಕಾರಕ್ಕೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇವೆ. ನುಡಿದಂತೆ ಈ ಕೆಳಕಂಡ ಒತ್ತಾಯಗಳನ್ನು ಈಡೇರಿಸಬೇಕೆಂದು ಈ ಮೂಲಕ ರೈತ ಹುತಾತ್ಮರ ದಿನದಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್‌ಆರ್‌ಪಿ ಬೆಲೆ ಅಡಿ ವೈಜ್ಞಾನಿಕವಾಗಿ ೫,೦೦೦ ರೂ. ನಿಗದಿ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕು, ಹಾಗೂ ರಾಜ್ಯ ಸರ್ಕಾರ ಬೆಲೆಯನ್ನು ಪ್ರತಿ ಟನ್‌ಗೆ ೫,೦೦೦ ರೂ.ವಿತರಿಸಬೇಕು ಎಂದರು.

ಪಟ್ಟಣವನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಹೊರಟಿದ್ದು, ಈ ವ್ಯಾಪ್ತಿಯಲ್ಲಿ ಸೋಮನಹಳ್ಳಿ, ಚಾಮನಹಳ್ಳಿ, ಕೊರವನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿಸಲು ತೀವ್ರ ವಿರೋಧವಿದ್ದು, ಕೂಡಲೇ ಈ ನೀತಿಯನ್ನು ಕೈಬಿಡಬೇಕು ಎಂದರು.

ಕೆಆರ್‌ಎಸ್ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಲು ನಾಲೆಗಳಲ್ಲಿ ನಿರಂತರವಾಗಿ ನೀರು ಹರಿಸಬೇಕು. ಕಾಮಗಾರಿ ಹೆಸರಿನಲ್ಲಿ ರೈತರಿಗೆ ತೊಂದರೆ ಮಾಡಬಾರದು, ಮುಂಗಾರು ಪ್ರಾರಂಭವಾಗಿದ್ದು ರೈತರಿಗೆ ಅನುಕೂಲವಾಗುವಂತೆ ರಸಗೊಬ್ಬರ ಕೊರತೆಯನ್ನು ಸರಿಪಡಿಸಬೇಕು. ತಪ್ಪಿದಲ್ಲಿ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಸಿ.ಉಮೇಶ್ ಎಚ್ಚರಿಸಿದರು.

ಗೌರವಾಧ್ಯಕ್ಷ ಜಿ.ಕೆ.ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಟಿ.ಎಲ್ ವಿನೋದ್‌ಬಾಬು, ಖಜಾಂಚಿ ಬೋರೇಗೌಡ, ರಾಜ್ಯ ಸಮಿತಿಯ ಮಲ್ಲಯ್ಯ, ರಾಮನಗರ ತಾಲ್ಲೂಕು ಅಧ್ಯಕ್ಷ ತಿಮ್ಮೇಗೌಡ, ಕೃಷ್ಣಪ್ಪ, ರೈತ ಮುಖಂಡರಾದ ಲಿಂಗಪ್ಪಾಜಿ, ವರದಪ್ಪ, ರವಿ, ಅಶೋಕ್, ಶಶಿಧರ್, ಜಿ.ಎ.ಶಂಕರ್, ರಾಜು, ವೀರಪ್ಪ, ಶಂಕರೇಗೌಡ, ರತ್ನಮ್ಮ, ನಂದಿನಿ, ನಾಗರತ್ನ, ರಾಜಮಣಿ, ಸಾವಿತ್ರಮ್ಮ, ವಸಂತಮ್ಮ, ವೆಂಕಟೇಗೌಡ, ಸತೀಶ್, ಕೃಷ್ಣೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

3 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago