ಮಂಡ್ಯ

ಟನ್‌ ಕಬ್ಬಿಗೆ 5,500ರೂ ನಿಗದಿಪಡಿಸಲು ಆಗ್ರಹ

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಸಕ್ಕರೆ ಇಳುವರಿ ತಿಳಿಸುವುದು ಮತ್ತು ತೂಕದಲ್ಲಿ ನಡೆಯುವ ಮೋಸ ತಡೆಗಟ್ಟಬೇಕೆಂದು ಘೋಷಣೆ ಕೂಗಿದರು.

ದೇಶದಲ್ಲಿ ಸುಮಾರು ಐದು ಕೋಟಿ ರೈತರು ಕಬ್ಬು ಬೆಳೆಯುತ್ತಾರೆ. ಕರ್ನಾಟಕ ಕಬ್ಬು ಬೆಳೆಯುವುದರಲ್ಲಿ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಕರ್ನಾಟಕದಲ್ಲಿ ಮಂಡ್ಯ ಜಿಲ್ಲೆ ಅತಿ ಹೆಚ್ಚು ಕಬ್ಬು ಬೆಳೆಯುವ ಮೂಲಕ ಸಕ್ಕರೆ ನಾಡು ಎಂಬ ಕೀರ್ತಿಗೆ ಪಾತ್ರವಾಗಿದೆ. ಜೊತೆಗೆ ಮಂಡಿಯುದ್ದ ಕಬ್ಬು, ಎದೆ ಉದ್ದ ಸಾಲ ಎಂಬ ಅಪಕೀರ್ತಿಯನ್ನು ನಮ್ಮ ರೈತರು ಪಡೆದುಕೊಂಡಿದ್ದಾರೆ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಆಯುಕ್ತರು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ಮಾರ್ಗದರ್ಶನದಂತೆ ಟನ್ ಕಬ್ಬಿಗೆ ಕಟಾವು ವೆಚ್ಚ ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರಾರಂಭದಿಂದ ಕೊನೆವರೆಗೂ ಒಂದೇ ರೀತಿಯಲ್ಲಿ ಇರಬೇಕು. ಇದರ ಉಸ್ತುವಾರಿಯನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕು. ಸಕ್ಕರೆ ಆಡಳಿತ ಮಂಡಳಿಯವರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆಯನ್ನು ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆರಂಭಕ್ಕೂ ಮುನ್ನ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕಬ್ಬು ಸರಬರಾಜು ಮಾಡಲು ಮತ್ತು ಕೊಳ್ಳಲು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರ ನಡುವೆ ದ್ವಿಪಕ್ಷೀಯ ಒಡಂಬಡಿಕೆ ಪತ್ರಕ್ಕೆ ಇಬ್ಬರೂ ಸಹಿ ಹಾಕಬೇಕು ಎಂದು ಆಗ್ರಹಿಸಿದರು.

ಸಂಘದ ಕುಳ್ಳೇಗೌಡ, ಸತೀಶ್, ರಘುನಾಥ್, ನಾಗೇಂದ್ರ, ಶ್ರೀನಿವಾಸ್, ಲಿಂಗರಾಜಮೂರ್ತಿ, ಸಿದ್ದೇಗೌಡ, ವಿಶ್ವನಾಥ್, ಗುರುಸ್ವಾಮಿ, ಮುತ್ತುರಾಜ್, ನಂಜುಂಡಸ್ವಾಮಿ, ಚಿಕ್ಕರಾಚಯ್ಯ, ಕೆ.ಎನ್.ಮೂರ್ತಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

19 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

1 hour ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

5 hours ago