ಮಂಡ್ಯ

ಟನ್‌ ಕಬ್ಬಿಗೆ 5,500ರೂ ನಿಗದಿಪಡಿಸಲು ಆಗ್ರಹ

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಸಕ್ಕರೆ ಇಳುವರಿ ತಿಳಿಸುವುದು ಮತ್ತು ತೂಕದಲ್ಲಿ ನಡೆಯುವ ಮೋಸ ತಡೆಗಟ್ಟಬೇಕೆಂದು ಘೋಷಣೆ ಕೂಗಿದರು.

ದೇಶದಲ್ಲಿ ಸುಮಾರು ಐದು ಕೋಟಿ ರೈತರು ಕಬ್ಬು ಬೆಳೆಯುತ್ತಾರೆ. ಕರ್ನಾಟಕ ಕಬ್ಬು ಬೆಳೆಯುವುದರಲ್ಲಿ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಕರ್ನಾಟಕದಲ್ಲಿ ಮಂಡ್ಯ ಜಿಲ್ಲೆ ಅತಿ ಹೆಚ್ಚು ಕಬ್ಬು ಬೆಳೆಯುವ ಮೂಲಕ ಸಕ್ಕರೆ ನಾಡು ಎಂಬ ಕೀರ್ತಿಗೆ ಪಾತ್ರವಾಗಿದೆ. ಜೊತೆಗೆ ಮಂಡಿಯುದ್ದ ಕಬ್ಬು, ಎದೆ ಉದ್ದ ಸಾಲ ಎಂಬ ಅಪಕೀರ್ತಿಯನ್ನು ನಮ್ಮ ರೈತರು ಪಡೆದುಕೊಂಡಿದ್ದಾರೆ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಆಯುಕ್ತರು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ಮಾರ್ಗದರ್ಶನದಂತೆ ಟನ್ ಕಬ್ಬಿಗೆ ಕಟಾವು ವೆಚ್ಚ ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರಾರಂಭದಿಂದ ಕೊನೆವರೆಗೂ ಒಂದೇ ರೀತಿಯಲ್ಲಿ ಇರಬೇಕು. ಇದರ ಉಸ್ತುವಾರಿಯನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕು. ಸಕ್ಕರೆ ಆಡಳಿತ ಮಂಡಳಿಯವರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆಯನ್ನು ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆರಂಭಕ್ಕೂ ಮುನ್ನ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕಬ್ಬು ಸರಬರಾಜು ಮಾಡಲು ಮತ್ತು ಕೊಳ್ಳಲು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರ ನಡುವೆ ದ್ವಿಪಕ್ಷೀಯ ಒಡಂಬಡಿಕೆ ಪತ್ರಕ್ಕೆ ಇಬ್ಬರೂ ಸಹಿ ಹಾಕಬೇಕು ಎಂದು ಆಗ್ರಹಿಸಿದರು.

ಸಂಘದ ಕುಳ್ಳೇಗೌಡ, ಸತೀಶ್, ರಘುನಾಥ್, ನಾಗೇಂದ್ರ, ಶ್ರೀನಿವಾಸ್, ಲಿಂಗರಾಜಮೂರ್ತಿ, ಸಿದ್ದೇಗೌಡ, ವಿಶ್ವನಾಥ್, ಗುರುಸ್ವಾಮಿ, ಮುತ್ತುರಾಜ್, ನಂಜುಂಡಸ್ವಾಮಿ, ಚಿಕ್ಕರಾಚಯ್ಯ, ಕೆ.ಎನ್.ಮೂರ್ತಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

3 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

6 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

6 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 hours ago