ಮಂಡ್ಯ

ಟನ್‌ ಕಬ್ಬಿಗೆ 5,500ರೂ ನಿಗದಿಪಡಿಸಲು ಆಗ್ರಹ

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಸಕ್ಕರೆ ಇಳುವರಿ ತಿಳಿಸುವುದು ಮತ್ತು ತೂಕದಲ್ಲಿ ನಡೆಯುವ ಮೋಸ ತಡೆಗಟ್ಟಬೇಕೆಂದು ಘೋಷಣೆ ಕೂಗಿದರು.

ದೇಶದಲ್ಲಿ ಸುಮಾರು ಐದು ಕೋಟಿ ರೈತರು ಕಬ್ಬು ಬೆಳೆಯುತ್ತಾರೆ. ಕರ್ನಾಟಕ ಕಬ್ಬು ಬೆಳೆಯುವುದರಲ್ಲಿ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಕರ್ನಾಟಕದಲ್ಲಿ ಮಂಡ್ಯ ಜಿಲ್ಲೆ ಅತಿ ಹೆಚ್ಚು ಕಬ್ಬು ಬೆಳೆಯುವ ಮೂಲಕ ಸಕ್ಕರೆ ನಾಡು ಎಂಬ ಕೀರ್ತಿಗೆ ಪಾತ್ರವಾಗಿದೆ. ಜೊತೆಗೆ ಮಂಡಿಯುದ್ದ ಕಬ್ಬು, ಎದೆ ಉದ್ದ ಸಾಲ ಎಂಬ ಅಪಕೀರ್ತಿಯನ್ನು ನಮ್ಮ ರೈತರು ಪಡೆದುಕೊಂಡಿದ್ದಾರೆ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಆಯುಕ್ತರು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ಮಾರ್ಗದರ್ಶನದಂತೆ ಟನ್ ಕಬ್ಬಿಗೆ ಕಟಾವು ವೆಚ್ಚ ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರಾರಂಭದಿಂದ ಕೊನೆವರೆಗೂ ಒಂದೇ ರೀತಿಯಲ್ಲಿ ಇರಬೇಕು. ಇದರ ಉಸ್ತುವಾರಿಯನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕು. ಸಕ್ಕರೆ ಆಡಳಿತ ಮಂಡಳಿಯವರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆಯನ್ನು ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆರಂಭಕ್ಕೂ ಮುನ್ನ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕಬ್ಬು ಸರಬರಾಜು ಮಾಡಲು ಮತ್ತು ಕೊಳ್ಳಲು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರ ನಡುವೆ ದ್ವಿಪಕ್ಷೀಯ ಒಡಂಬಡಿಕೆ ಪತ್ರಕ್ಕೆ ಇಬ್ಬರೂ ಸಹಿ ಹಾಕಬೇಕು ಎಂದು ಆಗ್ರಹಿಸಿದರು.

ಸಂಘದ ಕುಳ್ಳೇಗೌಡ, ಸತೀಶ್, ರಘುನಾಥ್, ನಾಗೇಂದ್ರ, ಶ್ರೀನಿವಾಸ್, ಲಿಂಗರಾಜಮೂರ್ತಿ, ಸಿದ್ದೇಗೌಡ, ವಿಶ್ವನಾಥ್, ಗುರುಸ್ವಾಮಿ, ಮುತ್ತುರಾಜ್, ನಂಜುಂಡಸ್ವಾಮಿ, ಚಿಕ್ಕರಾಚಯ್ಯ, ಕೆ.ಎನ್.ಮೂರ್ತಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

1 hour ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago