ಮಂಡ್ಯ

ಟನ್‌ ಕಬ್ಬಿಗೆ 5,500ರೂ ನಿಗದಿಪಡಿಸಲು ಆಗ್ರಹ

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಸಕ್ಕರೆ ಇಳುವರಿ ತಿಳಿಸುವುದು ಮತ್ತು ತೂಕದಲ್ಲಿ ನಡೆಯುವ ಮೋಸ ತಡೆಗಟ್ಟಬೇಕೆಂದು ಘೋಷಣೆ ಕೂಗಿದರು.

ದೇಶದಲ್ಲಿ ಸುಮಾರು ಐದು ಕೋಟಿ ರೈತರು ಕಬ್ಬು ಬೆಳೆಯುತ್ತಾರೆ. ಕರ್ನಾಟಕ ಕಬ್ಬು ಬೆಳೆಯುವುದರಲ್ಲಿ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಕರ್ನಾಟಕದಲ್ಲಿ ಮಂಡ್ಯ ಜಿಲ್ಲೆ ಅತಿ ಹೆಚ್ಚು ಕಬ್ಬು ಬೆಳೆಯುವ ಮೂಲಕ ಸಕ್ಕರೆ ನಾಡು ಎಂಬ ಕೀರ್ತಿಗೆ ಪಾತ್ರವಾಗಿದೆ. ಜೊತೆಗೆ ಮಂಡಿಯುದ್ದ ಕಬ್ಬು, ಎದೆ ಉದ್ದ ಸಾಲ ಎಂಬ ಅಪಕೀರ್ತಿಯನ್ನು ನಮ್ಮ ರೈತರು ಪಡೆದುಕೊಂಡಿದ್ದಾರೆ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಆಯುಕ್ತರು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ಮಾರ್ಗದರ್ಶನದಂತೆ ಟನ್ ಕಬ್ಬಿಗೆ ಕಟಾವು ವೆಚ್ಚ ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರಾರಂಭದಿಂದ ಕೊನೆವರೆಗೂ ಒಂದೇ ರೀತಿಯಲ್ಲಿ ಇರಬೇಕು. ಇದರ ಉಸ್ತುವಾರಿಯನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕು. ಸಕ್ಕರೆ ಆಡಳಿತ ಮಂಡಳಿಯವರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆಯನ್ನು ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆರಂಭಕ್ಕೂ ಮುನ್ನ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕಬ್ಬು ಸರಬರಾಜು ಮಾಡಲು ಮತ್ತು ಕೊಳ್ಳಲು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರ ನಡುವೆ ದ್ವಿಪಕ್ಷೀಯ ಒಡಂಬಡಿಕೆ ಪತ್ರಕ್ಕೆ ಇಬ್ಬರೂ ಸಹಿ ಹಾಕಬೇಕು ಎಂದು ಆಗ್ರಹಿಸಿದರು.

ಸಂಘದ ಕುಳ್ಳೇಗೌಡ, ಸತೀಶ್, ರಘುನಾಥ್, ನಾಗೇಂದ್ರ, ಶ್ರೀನಿವಾಸ್, ಲಿಂಗರಾಜಮೂರ್ತಿ, ಸಿದ್ದೇಗೌಡ, ವಿಶ್ವನಾಥ್, ಗುರುಸ್ವಾಮಿ, ಮುತ್ತುರಾಜ್, ನಂಜುಂಡಸ್ವಾಮಿ, ಚಿಕ್ಕರಾಚಯ್ಯ, ಕೆ.ಎನ್.ಮೂರ್ತಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

12 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

12 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

13 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

14 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

14 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 hours ago