ಮಂಡ್ಯ

ಬೆಲೆ ಏರಿಕೆ ಹಿಂಪಡೆಯಲು ಆಗ್ರಹ

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ ವಸ್ತುಗಳು, ಸರ್ಕಾರಿ ಸೇವಾ ಶುಲ್ಕಗಳು ಏರಿಕೆ ಮಾಡಿರುವುದು, ಸರ್ಕಾರದ ಬೊಕ್ಕಸ ಖಾಲಿಯಾಗಿ ಎಂಬುದನ್ನು ತೋರುತ್ತದೆ. ಗ್ಯಾರೆಂಟಿಗೆ ಹಣ ಹೊಂದಿಸಲು ನಿರಂತರ ಬೆಲೆ ಏರಿಕೆಗೆ ಕಾಂಗ್ರೆಸ ಸರ್ಕಾರ ಮುಂದಾಗಿದೆ ಎಂದು ದೂರಿದರು.

ಬೆಲೆ ಏರಿಕೆ ಮಾಡಿಕೊಂಡು ೪ ಲಕ್ಷ ಕೋಟಿಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಮಂಕುಬೂದಿ ಎರಚುತಿದ್ದು, ಸುಮಾರು ೪೦ ಸಾವಿರ ಕೋಟಿ ಹಣ ಪಾವತಿಯನ್ನು ಬಾಕಿ ಉಳಿಸಿಕೊಂಡಿದ್ದು, ಬಜೆಟ್‌ನಲ್ಲಿ ತೋರಿಸದೇ ಇದ್ದು, ಅಭಿವೃದ್ಧಿ ಹಾಗೂ ಸಣ್ಣ ಕಾಮಗಾರಿಗಳಿಗೂ ಹಣ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಅನುದಾನದ ಕೊರತೆಯಿಂದಾಗಿ ಶಾಸಕರುಗಳು ಪರ್ಸೆಂಟೇಜ್ ಸಿಗದೆ ಪರದಾಡುತ್ತಿದ್ದಾರೆ, ಸರ್ಕಾರಿ ಕಛೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಕ್ರಮ ಮರಳು ಗಣಿಗಾರಿಕೆ, ಕ್ರಷರ್‌ಗಳಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಸಾಧ್ಯವಾಗದೇ ನಿರಂತರ ಲೂಟಿ ನಡೆಯುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಸಚಿವರುಗಳು ಮತ್ತೆ ತಮ್ಮಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲವೆಂಬಂತೆ ಮುಖ್ಯಮಂತ್ರಿ ಸ್ಥಾನಕ್ಕೆ ನಾಮುಂದು, ತಾಮುಂದು ಎಂದು ಲಾಭಿ ನಡೆಸುತ್ತಿದ್ದು, ರಾಜ್ಯದ ಅಭಿವೃದ್ಧಿ, ಜನಪರ ಕಾಳಜಿಯೇ ಇಲ್ಲದೆ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಸರ್ಕಾರ ಕೂಡಲೇ ಭಷ್ಟಾಚಾರ, ದುರಾಡಳಿತವನ್ನು ನಿಲ್ಲಿಸಿದೇ ಹೋದಲ್ಲಿ ತಮ್ಮ ಗ್ಯಾರೆಂಟಿಯನ್ನೂ ನಿಲ್ಲಿಸು ಸ್ಥಿತಿಗೆ ತಲುಪಲಿದ್ದು, ದಕ್ಷ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಕ್ರಮ ವಹಿಸಿ, ತಕ್ಷಣವೇ ಬೆಲೆ ಏರಿಕೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ರಮೇಶ್ ಗೌಡ, ಮಲ್ಲೀಶ್, ಕಾಂತರಾಜು, ಶಶಿಧರ್, ರವೀಂದ್ರ, ಜಯಪ್ರಕಾಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

1 hour ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

1 hour ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

1 hour ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

1 hour ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

11 hours ago