ಮಂಡ್ಯ

ಡಿಕೆಶಿಗೆ ಸಿಎಂ ಸ್ಥಾನ ನೀಡಲು ಆಗ್ರಹ : ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಒಕ್ಕಲಿಗರು

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸಿದ್ದು ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಾದಿಕಾರಿಗಳು ಹಾಗೂ ಮುಖಂಡರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಇದು ರೆಬೆಲಿಯನ್‌ ಸಿದ್ದರಾಮಯ್ಯ ವರ್ಸಸ್‌ ಕಾಂಪ್ರಮೈಸ್‌ ಸಿದ್ದರಾಮಯ್ಯ ನಡುವಿನ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ, ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಹಾಗೂ ಸಧೃಡಗೊಳಿಸುವ ಮೂಲಕ 126ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳನ್ನು ಮುಖ್ಯಮಂತ್ರಿಗಳನ್ನಾಗಿ ಮಾಡುವುದಾಗಿ ಹೈಕಮಾಂಡ್ ಒಪ್ಪಂದ ಮಾಡಿತ್ತು. ಆದರೆ, ಈಗಾಗಲೇ ಎರಡೂವರೆ ವರ್ಷಗಳ ಕಾಲ ಜನಾನುರಾಗಿಯಾಗಿ ಆಡಳಿತ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕೆಂದು ಆಗ್ರಹಿಸಿದರು.

ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಶಿವಪ್ಪ ಮಾತನಾಡಿ, ಪಕ್ಷಕ್ಕಾಗಿ ಡಿ.ಕೆ.ಶಿವಕುಮಾರ್ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿದ್ದಾಗ ಪಕ್ಷವನ್ನು ಮುನ್ನಡೆಸಿ ಈ ಹಂತಕ್ಕೆ ತಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಪಕ್ಷ ಬಲಿಷ್ಠಗೊಳಿಸುವಲ್ಲಿಯೂ ಅವರದೇ ಪಾಲು ಹೆಚ್ಚಿದೆ. ಹೀಗಾಗಿ ಪಕ್ಷ ಸಂಘಟನೆಗಾಗಿ ಇಷ್ಟೊಂದು ಶ್ರಮ ವಹಿಸಿರುವ ಅವರಿಗೆ ಸಿಎಂ ಸ್ಥಾನ ನೀಡಬೇಕೆಂಬುದು ಸಮುದಾಯದ ಕೂಗಾಗಿದೆ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಿವರಾಂ, ಲಕ್ಷ್ಮಮ್ಮ, ಹರೀಶ್, ಶಿವಕುಮಾರ್, ಗೋವಿಂದರಾಜು, ಸುರೇಶ್, ಕುಮಾರ್, ಮುರಳಿ, ಮರಿದೇವರು, ಬಸವರಾಜು, ಪ್ರಭಾಕರ್, ನಾಗರಾಜ್, ಚನ್ನಪ್ಪ, ಕೃಷ್ಣೇಗೌಡ ಸೇರಿದಂತೆ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

56 mins ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

58 mins ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

60 mins ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

1 hour ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

1 hour ago