ಮಂಡ್ಯ

ಡಿಕೆಶಿಗೆ ಸಿಎಂ ಸ್ಥಾನ ನೀಡಲು ಆಗ್ರಹ : ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಒಕ್ಕಲಿಗರು

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸಿದ್ದು ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಾದಿಕಾರಿಗಳು ಹಾಗೂ ಮುಖಂಡರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಇದು ರೆಬೆಲಿಯನ್‌ ಸಿದ್ದರಾಮಯ್ಯ ವರ್ಸಸ್‌ ಕಾಂಪ್ರಮೈಸ್‌ ಸಿದ್ದರಾಮಯ್ಯ ನಡುವಿನ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ, ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಹಾಗೂ ಸಧೃಡಗೊಳಿಸುವ ಮೂಲಕ 126ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳನ್ನು ಮುಖ್ಯಮಂತ್ರಿಗಳನ್ನಾಗಿ ಮಾಡುವುದಾಗಿ ಹೈಕಮಾಂಡ್ ಒಪ್ಪಂದ ಮಾಡಿತ್ತು. ಆದರೆ, ಈಗಾಗಲೇ ಎರಡೂವರೆ ವರ್ಷಗಳ ಕಾಲ ಜನಾನುರಾಗಿಯಾಗಿ ಆಡಳಿತ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕೆಂದು ಆಗ್ರಹಿಸಿದರು.

ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಶಿವಪ್ಪ ಮಾತನಾಡಿ, ಪಕ್ಷಕ್ಕಾಗಿ ಡಿ.ಕೆ.ಶಿವಕುಮಾರ್ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿದ್ದಾಗ ಪಕ್ಷವನ್ನು ಮುನ್ನಡೆಸಿ ಈ ಹಂತಕ್ಕೆ ತಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಪಕ್ಷ ಬಲಿಷ್ಠಗೊಳಿಸುವಲ್ಲಿಯೂ ಅವರದೇ ಪಾಲು ಹೆಚ್ಚಿದೆ. ಹೀಗಾಗಿ ಪಕ್ಷ ಸಂಘಟನೆಗಾಗಿ ಇಷ್ಟೊಂದು ಶ್ರಮ ವಹಿಸಿರುವ ಅವರಿಗೆ ಸಿಎಂ ಸ್ಥಾನ ನೀಡಬೇಕೆಂಬುದು ಸಮುದಾಯದ ಕೂಗಾಗಿದೆ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಿವರಾಂ, ಲಕ್ಷ್ಮಮ್ಮ, ಹರೀಶ್, ಶಿವಕುಮಾರ್, ಗೋವಿಂದರಾಜು, ಸುರೇಶ್, ಕುಮಾರ್, ಮುರಳಿ, ಮರಿದೇವರು, ಬಸವರಾಜು, ಪ್ರಭಾಕರ್, ನಾಗರಾಜ್, ಚನ್ನಪ್ಪ, ಕೃಷ್ಣೇಗೌಡ ಸೇರಿದಂತೆ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago