ಮಂಡ್ಯ

ಪ್ರಜಾಪ್ರಭುತ್ವ ದಿನಾಚರಣೆ: ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿದ ಸಚಿವ ಎನ್.ಚಲುವರಾಯಸ್ವಾಮಿ

ಮದ್ದೂರಿನ ನಿಡಘಟ್ಟ ಬಳಿಯಿಂದ ಸಿದ್ದಲಿಂಗಪುರದ ವರೆಗೆ 62ಕಿ.ಮೀ ಉದ್ದದ ಮಾನವ ಸರಪಳಿ.

ಮಂಡ್ಯ: ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15 ರಂದು ಆಚರಿಸುತ್ತಿದ್ದು, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮಂಡ್ಯ ಮಿಮ್ಸ್ ನ ಆವರಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

1997ರ ಸೆಪ್ಟೆಂಬರ್ 15 ರಂದು ವಿಶ್ವಸಂಸ್ಥೆಯು ವಿಶ್ವ ಪ್ರಜಾಪ್ರಭುತ್ವ ದಿನವೆಂದು ತೀರ್ಮಾನಿಸಿ ಘೋಷಣೆ ಮಾಡಿತು. ತದನಂತರ 2007ರಲ್ಲಿ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವುದಾಗಿ ಸಹಿ ಹಾಕಿ ಒಪ್ಪಂದ ಮಾಡಿಕೊಂಡವು ಎಂದರು.

ಕರ್ನಾಟಕ ಸರ್ಕಾರ ಈ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವುದಾಗಿ ತಿಳಿಸಿತು. ಆದ್ದರಿಂದ ಈ ದಿನ ನಮ್ಮ ರಾಷ್ಟ್ರಕ್ಕೆ ಹಾಗೂ ಪ್ರಜಾಪ್ರಭುತ್ವ ಇರುವಂತಹ ಎಲ್ಲಾ ರಾಷ್ಟ್ರಗಳಿಗೂ ಪವಿತ್ರವಾದ ದಿನವಾಗಿದೆ ಎಂದರು.

ಯಾವುದೇ ಸರ್ಕಾರ ರಚನೆಯಾಗಬೇಕೆಂದರೆ ಪ್ರಜೆಗಳಿಂದ ಪ್ರತಿನಿಧಿಗಳು ಆಯ್ಕೆಯಾಗಿ ಮುಂದೆ ಸರ್ಕಾರವನ್ನು ರಚಿಸಿ ನಡೆಸಿಕೊಂಡು ಹೋಗಲಾಗುತ್ತದೆ. ಈ ಮೂಲಕ ಪ್ರಜೆಗಳ ತೀರ್ಮಾನದ ಮಹತ್ವವನ್ನು ತಿಳಿಯಬಹುದು ಎಂದು ಹೇಳಿದರು.

ಸಂವಿಧಾನ ಶಿಲ್ಪಿಯಾದ ಡಾ ಬಿ ಆರ್ ಅಂಬೇಡ್ಕರ್ ರವರು ಭಾರತ ಸಂವಿಧಾನದಲ್ಲಿ ಪ್ರಜಾಪ್ರಭುತ್ವವನ್ನು ರಚಿಸುವ ಮೂಲಕ ದೇಶದ ಪ್ರತಿಯೊಬ್ಬರ ಬದುಕಿಗೆ ಶಕ್ತಿ ತುಂಬುವಂತಹ ಕೆಲಸವನ್ನು ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಕಷ್ಟು ಶ್ರಮಿಸಿದ್ದಾರೆ. ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂವಿಧಾನವನ್ನು ಪ್ರಶಂಸಿಸುವಂತೆ ಮಾಡಿದ್ದಾರೆ. ನಮ್ಮ ಭಾರತ ದೇಶಕ್ಕೆ ಸಂವಿಧಾನವನ್ನು ನೀಡಿದ ಮಹಾನ್ ವ್ಯಕ್ತಿಯಾದ ಇವರನ್ನು ಪ್ರತಿಯೊಬ್ಬರು ನೆನೆಯಬೇಕು ಎಂದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿ ಅತೀ ಉದ್ದವಾದ ಮಾನವ ಸರಪಳಿಯ ಮೂಲಕ ಅಧಿಕೃತವಾಗಿ ಪ್ರಜಾಪ್ರಭುತ್ವದ ಅರಿವನ್ನು ಮೂಡಿಸಲಾಗುತ್ತಿದೆ. ಮಾನವ ಸರಪಳಿಯು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೂ ಏಕಕಾಲದಲ್ಲಿ ಜಾಗೃತಿ ಮೂಡಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಮದ್ದೂರಿನ ನಿಡಘಟ್ಟ ಗ್ರಾಮದಿಂದ ಶ್ರೀರಂಗಪಟ್ಟಣದ ಸಿದ್ದಲಿಂಗಾಪುರದವರೆಗೂ ಸುಮಾರು 65 ಕಿ. ಮೀ. ವರೆಗೂ ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಮಾನವ ಸರಪಳಿಯ ನಿರ್ಮಾಣ ಮಾಡುವ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು. ಕಾರ್ಯಕ್ರಮವನ್ನು ಬಹಳ ಯಶಸ್ವಿಯಾಗಿ ಮೂಡಿಸಿದಂತಹ ಜಿಲ್ಲಾಡಳಿತ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಅಭಿನಂದನೆ ತಿಳಿಸಿದರು.

ಬಳಿಕ ಸಚಿವರು, ಅಧಿಕಾರಿಗಳು, ವಿದ್ಯಾರ್ಥಿಗಳ ಕೈ ಹಿಡಿದು ಸಚಿವ ಚಲುವರಾಯಸ್ವಾಮಿ ಮಾನವ ಸರಪಳಿ ನಿರ್ಮಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಭಾರತದ ಸಂವಿಧಾನದ ಪೀಠಿಕೆಯನ್ನು ಬೋದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಶುಗರ್ ಸಕ್ಕರೆ ಕಂಪನಿಯ ಅಧ್ಯಕ್ಷ ಸಿ ಡಿ ಗಂಗಾಧರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ರೆಡ್ ಕ್ರಾಸ್ ಸಂಸ್ಥೆಯ ಡಾ ಮೀರಾಶಿವಲಿಂಗಯ್ಯ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago