Mysore
21
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮೈಸೂರು-ಬೆಂಗಳೂರು ಹೆದ್ದಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು.

ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಹಾಗೂ ಇದೇ ರೀತಿಯಾಗಿ ಜಿಲ್ಲಾದ್ಯಂತ ಇರುವ ಅಪೂರ್ಣವಾದ ಒಳಚರಂಡಿ ಕಾಮಗಾರಿಗಳನ್ನೂ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನು ಓದಿ : ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್‌ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ತೂಬಿನಕೆರೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದಾಗಿ ನಿರಂತರವಾಗಿ ಹೆಚ್ಚು ಅಪಘಾತಗಳಾಗುತ್ತಿವೆ. ಅಲ್ಲದೆ

ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಆರಕ್ಷಕ ಅಧಿಕ್ಷಕ ಸಿ.ಈ.ತಿಮ್ಮಯ್ಯ, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಎಂ.ಎಸ್.ಒಬಲೆ ಹಾಜರಿದ್ದರು.

Tags:
error: Content is protected !!