Deputy Commissioner visits Mandya Municipal Council, inspects
ಮಂಡ್ಯ : ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಗರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ, ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರಸಭೆಯ ಕಂದಾಯ ವಿಭಾಗಕ್ಕೆ ಭೇಟಿ ನೀಡಿ ಭೇಟಿ ನೀಡಿ ‘ಎ’ ಖಾತೆ ಮತ್ತು ‘ಬಿ’ ಖಾತೆ ನೀಡುವ ಬಗ್ಗೆ ಪ್ರಗತಿಯನ್ನು ಪರಿಶೀಲಿಸಿದರು. ಇಂದಿರಾ ಕ್ಯಾಂಟೀನ್ನಲ್ಲಿ ಆಹಾರ ಗುಣಮಟ್ಟವನ್ನು ಕಾಪಾಡುವಂತೆ ಸೂಚನೆ ನೀಡಿದರು.
ಸಕಾಲ ಸೇವೆಯಲ್ಲಿ ಬರುವಂತಹ ಸಾರ್ವಜನಿಕ ಸೇವೆಗಳನ್ನು ನಿಗದಿತ ಅವಧಿಯಲ್ಲಿ ನೀಡಬೇಕು. ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನ ವಿಲೇಗೊಳಿಸುವ ಸಂಬಂಧ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
‘ಎ’ ಖಾತಾ ಮತ್ತು ‘ಬಿ’ ಖಾತಾಗಳ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಒಂದು ವಾರದಲ್ಲಿ ಒಂದು ವಾರ್ಡ್ನಂತೆ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡುವಂತೆ ತಿಳಿಸಿದರು.
ನಗರಸಭೆ ವತಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ಮಾರುಕಟ್ಟೆ ಸಂಬಂಧ ಸೂಕ್ತ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು. ನಂತರ ಜಿಲ್ಲಾಧಿಕಾರಿಗಳು ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು, ಪೌರಾಯುಕ್ತರು ಹಾಗೂ ಇತರೆ ಸಿಬ್ಬಂದಿಗಳ ಸಭೆಯನ್ನು ನಡೆಸಿ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ನಿಗದಿತ ಅವಽಯಲ್ಲಿ ನಿಯಮಾನುಸಾರ ನೀಡುವಂತೆ ಸೂಚನೆ ನೀಡಿದರು.
ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…
ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…
ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…