ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ ಘಟನೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣ್ಮರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿದ ಜೆಡಿಎಸ್ ಕಾನೂನು ಸುವ್ಯವಸ್ಥೆ ಕಾಪಾಡಲು ಆಗ್ರಹಸಿದೆ.
ಗೃಹ ಇಲಾಖೆ ಹೊಣೆ ಹೊತ್ತಿರುವ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ರೆಯಲ್ಲಿದೆ ಎಂದು ಟೀಕಿಸಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲ ವಿಧದಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹಿಂದಿನ ಸರ್ಕಾರಗಳ ಆಡಳಿತದಲ್ಲಿ ರೇಪ್ ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…