ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ ಘಟನೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣ್ಮರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿದ ಜೆಡಿಎಸ್ ಕಾನೂನು ಸುವ್ಯವಸ್ಥೆ ಕಾಪಾಡಲು ಆಗ್ರಹಸಿದೆ.
ಗೃಹ ಇಲಾಖೆ ಹೊಣೆ ಹೊತ್ತಿರುವ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ರೆಯಲ್ಲಿದೆ ಎಂದು ಟೀಕಿಸಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲ ವಿಧದಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹಿಂದಿನ ಸರ್ಕಾರಗಳ ಆಡಳಿತದಲ್ಲಿ ರೇಪ್ ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…