ಮಂಡ್ಯ

ಮಕ್ಕಳಿಗೆ ಸಾಹಿತ್ಯದ ರುಚಿ ಬೆಳೆಸಿ : ಶೇಕ್ ತನ್ವಿರ್ ಆಸೀಫ್

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  ತಿಳಿಸಿದರು.

ಅವರು ಗುರುವಾರ(ಜೂ.೬) ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನವಿಜ್ಞಾನ ಸಮಿತಿಯ ಸಹಯೋಗದಲ್ಲಿ ನಡೆದ ಮಕ್ಕಳ ಸಾಹಿತ್ಯ ಸಂಭ್ರಮ ಸಾಹಿತ್ಯ ಕ್ರೂಢೀಕರಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ತಮ್ಮ ಸಣ್ಣ ವಯಸ್ಸಿನಿಂದಲೇ ಅವರ ಅಭಿವ್ಯಕ್ತಿಯನ್ನು ಹೊರ ಹಾಕುವ ವಿವಿಧ ಪ್ರಕಾರಗಳನ್ನು ಪರಿಚಯ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪ್ರಪಂಚ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಒಂದು ಪ್ರಯತ್ನ ಈ ಕಾರ್ಯಕ್ರಮದಲ್ಲಿ ಅಡಗಿದೆ ಎಂದರು.

ಇಂದಿನ ಕಾರ್ಯಗಾರದಲ್ಲಿ ಮಕ್ಕಳು ಬರೆದ ಕಥೆ, ಕವನ, ನಾಟಕಗಳನ್ನು ಕ್ರೂಡೀಕರಣ ಮಾಡಿ ಅತ್ಯುತ್ತಮವಾದವುಗಳನ್ನು ರಾಜ್ಯ ಹಂತಕ್ಕೆ ಕಳಿಸುವ ಕಾರ್ಯ ನಡೆಯುತ್ತಿದೆ. ನಮ್ಮ ಜಿಲ್ಲೆಯ ಮಕ್ಕಳು ಬರೆದ ಸಾಹಿತ್ಯ ರಾಜ್ಯಮಟ್ಟದಲ್ಲಿ ಹೆಚ್ಚಾಗಿ ಆಯ್ಕೆಯಾಗಲೆಂದು ಹಾರೈಸುತ್ತಾ, ಕಾರ್ಯಗಾರ ಉದ್ಘಾಟನಾ ಸಂದರ್ಭದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಈ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ರಾಜ್ಯ ಸಂಚಾಲಕರಾದ ಟಿ ಎ ಪ್ರಶಾಂತ್ ಬಾಬು ಪ್ರಾಸ್ತವಿಕ ಮಾತನಾಡಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಮಕ್ಕಳಿಗೆ ಸ್ಪಂದಿಸುವ ಸ್ಥಳೀಯ ಆಡಳಿತ ಎಂಬ ಯೋಜನೆ ಅಡಿಯಲ್ಲಿ ಭಾರತ ಜ್ಞಾನವಿಜ್ಞಾನ ಸಮಿತಿಯ ಸಹಯೋಗದೊಂದಿಗೆ ಮಂಡ್ಯ ಜಿಲ್ಲೆಯ ಐದು ತಾಲೂಕುಗಳಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಹಬ್ಬವನ್ನು ನಡೆಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಸುಮಾರು 2000 ಕ್ಕೂ ಹೆಚ್ಚು ಪುಟಗಳ ನವೀನ ಸಾಹಿತ್ಯವನ್ನು ಸೃಜನೆ ಮಾಡಿರುತ್ತಾರೆ. ಈ ಸಾಹಿತ್ಯದ ಕ್ರೂಢೀಕರಣ ಹಾಗೂ ರಾಜ್ಯಮಟ್ಟದ ಪುಸ್ತಕ ಪ್ರಕಟಣೆಗೆ ಸಾಹಿತ್ಯದ ಆಯ್ಕೆಗಾಗಿ ಈ ಒಂದು ಕ್ರೂಢೀಕರಣ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ಮಂಡ್ಯ ಜಿಲ್ಲಾ ಅಧ್ಯಕ್ಷರಾದ ಪ್ರೊ. ಎಸ್. ರೇವಣ್ಣ ಅವರು ಮಾತನಾಡಿ ಮಕ್ಕಳ ಸಾಹಿತ್ಯ ಸಂಭ್ರಮ ಮಕ್ಕಳಿಂದಲೇ ಲೇಖನಗಳನ್ನು ಬರೆಸುವ ಅತ್ಯಂತ ನವೀನ ಚಟುವಟಿಕೆಯಾಗಿದ್ದು, ಮಕ್ಕಳಲ್ಲಿ ಅಭಿವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ, ಶ್ರೀರಂಗಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ತಾಲೂಕುಗಳಲ್ಲಿನ ಆಯ್ದ 15 ಪಂಚಾಯಿತಿಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಯೋಜನಾಧಿಕಾರಿ ಎಸ್ ಧನುಷ್, ಜಿಲ್ಲಾ ಪಂಚಾಯತ್ ನ ಯೋಜನಾ ಅಂದಾಜು ಮೌಲ್ಯ ಮಾಪನಾಧಿಕಾರಿ ಎಂ ಶಿವಮ್ಮ, ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ನಂಜರಾಜು ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 30 ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

11 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago