ಮಂಡ್ಯ

ಮಕ್ಕಳಿಗೆ ಸಾಹಿತ್ಯದ ರುಚಿ ಬೆಳೆಸಿ : ಶೇಕ್ ತನ್ವಿರ್ ಆಸೀಫ್

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  ತಿಳಿಸಿದರು.

ಅವರು ಗುರುವಾರ(ಜೂ.೬) ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನವಿಜ್ಞಾನ ಸಮಿತಿಯ ಸಹಯೋಗದಲ್ಲಿ ನಡೆದ ಮಕ್ಕಳ ಸಾಹಿತ್ಯ ಸಂಭ್ರಮ ಸಾಹಿತ್ಯ ಕ್ರೂಢೀಕರಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ತಮ್ಮ ಸಣ್ಣ ವಯಸ್ಸಿನಿಂದಲೇ ಅವರ ಅಭಿವ್ಯಕ್ತಿಯನ್ನು ಹೊರ ಹಾಕುವ ವಿವಿಧ ಪ್ರಕಾರಗಳನ್ನು ಪರಿಚಯ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪ್ರಪಂಚ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಒಂದು ಪ್ರಯತ್ನ ಈ ಕಾರ್ಯಕ್ರಮದಲ್ಲಿ ಅಡಗಿದೆ ಎಂದರು.

ಇಂದಿನ ಕಾರ್ಯಗಾರದಲ್ಲಿ ಮಕ್ಕಳು ಬರೆದ ಕಥೆ, ಕವನ, ನಾಟಕಗಳನ್ನು ಕ್ರೂಡೀಕರಣ ಮಾಡಿ ಅತ್ಯುತ್ತಮವಾದವುಗಳನ್ನು ರಾಜ್ಯ ಹಂತಕ್ಕೆ ಕಳಿಸುವ ಕಾರ್ಯ ನಡೆಯುತ್ತಿದೆ. ನಮ್ಮ ಜಿಲ್ಲೆಯ ಮಕ್ಕಳು ಬರೆದ ಸಾಹಿತ್ಯ ರಾಜ್ಯಮಟ್ಟದಲ್ಲಿ ಹೆಚ್ಚಾಗಿ ಆಯ್ಕೆಯಾಗಲೆಂದು ಹಾರೈಸುತ್ತಾ, ಕಾರ್ಯಗಾರ ಉದ್ಘಾಟನಾ ಸಂದರ್ಭದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಈ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ರಾಜ್ಯ ಸಂಚಾಲಕರಾದ ಟಿ ಎ ಪ್ರಶಾಂತ್ ಬಾಬು ಪ್ರಾಸ್ತವಿಕ ಮಾತನಾಡಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಮಕ್ಕಳಿಗೆ ಸ್ಪಂದಿಸುವ ಸ್ಥಳೀಯ ಆಡಳಿತ ಎಂಬ ಯೋಜನೆ ಅಡಿಯಲ್ಲಿ ಭಾರತ ಜ್ಞಾನವಿಜ್ಞಾನ ಸಮಿತಿಯ ಸಹಯೋಗದೊಂದಿಗೆ ಮಂಡ್ಯ ಜಿಲ್ಲೆಯ ಐದು ತಾಲೂಕುಗಳಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಹಬ್ಬವನ್ನು ನಡೆಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಸುಮಾರು 2000 ಕ್ಕೂ ಹೆಚ್ಚು ಪುಟಗಳ ನವೀನ ಸಾಹಿತ್ಯವನ್ನು ಸೃಜನೆ ಮಾಡಿರುತ್ತಾರೆ. ಈ ಸಾಹಿತ್ಯದ ಕ್ರೂಢೀಕರಣ ಹಾಗೂ ರಾಜ್ಯಮಟ್ಟದ ಪುಸ್ತಕ ಪ್ರಕಟಣೆಗೆ ಸಾಹಿತ್ಯದ ಆಯ್ಕೆಗಾಗಿ ಈ ಒಂದು ಕ್ರೂಢೀಕರಣ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ಮಂಡ್ಯ ಜಿಲ್ಲಾ ಅಧ್ಯಕ್ಷರಾದ ಪ್ರೊ. ಎಸ್. ರೇವಣ್ಣ ಅವರು ಮಾತನಾಡಿ ಮಕ್ಕಳ ಸಾಹಿತ್ಯ ಸಂಭ್ರಮ ಮಕ್ಕಳಿಂದಲೇ ಲೇಖನಗಳನ್ನು ಬರೆಸುವ ಅತ್ಯಂತ ನವೀನ ಚಟುವಟಿಕೆಯಾಗಿದ್ದು, ಮಕ್ಕಳಲ್ಲಿ ಅಭಿವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ, ಶ್ರೀರಂಗಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ತಾಲೂಕುಗಳಲ್ಲಿನ ಆಯ್ದ 15 ಪಂಚಾಯಿತಿಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಯೋಜನಾಧಿಕಾರಿ ಎಸ್ ಧನುಷ್, ಜಿಲ್ಲಾ ಪಂಚಾಯತ್ ನ ಯೋಜನಾ ಅಂದಾಜು ಮೌಲ್ಯ ಮಾಪನಾಧಿಕಾರಿ ಎಂ ಶಿವಮ್ಮ, ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ನಂಜರಾಜು ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 30 ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago