ಮಂಡ್ಯ

ದ್ವಿ ಭಾಷ ನೀತಿ ಅನುಷ್ಠಾನದಿಂದ ಕನ್ನಡ ಅಭಿವೃದ್ಧಿ : ಪ್ರೊ.ಶ್ರೀದೇವಿ

ಮಂಡ್ಯ : ಶಿಕ್ಷಣದಲ್ಲಿ ದ್ವಿ ಭಾಷಾ ನೀತಿಯನ್ನ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿಶ್ರಾಂತ ಆಂಗ್ಲಬಾಷಾ ಪ್ರಾಧ್ಯಾಪಕಿ ಶ್ರೀದೇವಿ ಹೇಳಿದರು.

ನಗರದ ಸ್ವರ್ಣಸಂದ್ರದ ಎಇಟಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭೂಮಿ ಬೆಳಗು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ‘ದ್ವಿಭಾಷಾ ನೀತಿಯ ಅನಿವಾರ್ಯತೆ’ ಕುರಿತ ವಿಚಾರ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರೂ ಶಿಕ್ಷಣದಲ್ಲಿ ಕನ್ನಡವನ್ನು ಕಲಿಯಬೇಕೆಂದು ಕಡ್ಡಾಯಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ತ್ರಿಭಾಷಾ ನೀತಿಯಿಂದ ಮಕ್ಕಳಿಗೆ ಮಾನಸಿಕ ಒತ್ತಡ ಉಂಟಾಗುತ್ತಿದ್ದು, ದ್ವಿ ಭಾಷಾ ನೀತಿಯು ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಉಪಯುಕ್ತವಾಗುತ್ತದೆ. ಇದರಿಂದ ಕನ್ನಡ ಭಾಷೆಯ ಬಳಕೆ ಮತ್ತೆ ಅಧ್ಯಯನವನ್ನು ಪ್ರೋತ್ಸಾಹಿ ಸಿದಂತಾಗುತ್ತದೆ ಎಂದರು.

ಚಿಂತಕ ಡಾ.ಕೆ.ಪಿ.ನಟರಾಜ್ ಅವರು ವಿಚಾರ ಮಂಡನೆ ಮಾಡಿ, ತ್ರಿಭಾಷಾ ಸೂತ್ರ ಗುಲಾಮಗಿರಿಯ ಸಂಕೇತವಾಗಿದ್ದು, ಇದರಿಂದ ಬಿಡುಗಡೆ ಹೊಂದುವ ಮನಸ್ಥಿತಿ ಕನ್ನಡಿಗರಲ್ಲಿ ಕ್ಷೀಣಿಸುತ್ತಿರುವುದು ವಿಷಾದನೀಯ ಸಂಗತಿ. ಕನ್ನಡಿಗರೆಲ್ಲರೂ ಕೂಡ ದ್ವಿಭಾಷಾ ನೀತಿಯ ಪರವಾಗಿರಬೇಕೆಂದರು.

ಎಇಟಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಪ್ರಾಧ್ಯಾಪಕ ಎಚ್.ಪಿ.ಧರ್ಮೇಶ್, ಭೂಮಿ ಬೆಳಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಸಹಾಯಕ ಪ್ರಾಧ್ಯಾಪಕರುಗಳಾದ ಸುಕೇಶ್, ದಯಾನಂದ್, ಮೋಹನ್‌ದಾಸ್, ವಾಣಿ, ರಕ್ಷಿತಾ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago