ಮಂಡ್ಯ

ಧರ್ಮಸ್ಥಳ ಎಲ್ಲರಿಗೂ ಸೇರಿದ್ದೇ ಹೊರತು ಕೇವಲ ಬಿಜೆಪಿಯವರಿಗೆ ಮಾತ್ರವಲ್ಲ : ಶಾಸಕ ಗಣಿಗ ರವಿಕುಮಾರ್

ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು.

ಮಾಧ್ಯಮದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟದ ವಿಚಾರಕ್ಕೆ ಮಾತನಾಡಿದ ಅವರು, ಧರ್ಮಸ್ಥಳ ಎಲ್ಲರಿಗೂ ಸೇರಿದ್ದು. ಕಾಂಗ್ರೆಸ್‌ನವರು ಕೂಡ ಧರ್ಮಸ್ಥಳ ಯಾತ್ರೆಗೆ ಹೋಗಿದ್ದೇವೆ. ೨೦೨೩ರವರೆಗೆ ಬಿಜೆಪಿ ಸರ್ಕಾರ ಇತ್ತು. ಸೌಜನ್ಯ ಸಾವು ಪ್ರಕರಣ ಬಿಜೆಪಿ ಆಡಳಿತಾವಧಿಯಲ್ಲೇ ಇತ್ತು. ಆರ್.ಅಶೋಕ್ ಗೃಹ ಸಚಿವರಾಗಿದ್ದರು. ಆಗ ಏಕೆ ತನಿಖೆ ನಡೆಸಲಿಲ್ಲ? ನಮಗೂ ರಾಜಕಾರಣ ಮಾಡುವುದಕ್ಕೆ ಬರುತ್ತದೆ. ಆದ್ದರಿಂದ ಬಿಜೆಪಿ ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು ಎಂದರು.

ಸೌಜನ್ಯ ಸತ್ತಿದ್ದಾರೆ, ಅದರ ತನಿಖೆ ಮಾಡಬೇಕಲ್ಲವೇ? ತನಿಖೆ ಮಾಡಿ ಎಂದು ಬಿಜೆಪಿಯವರೇ ಹೇಳಿದ್ದರು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕುಟುಂಬದವರೇ ಅವರೇ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿಯವರು ಎಸ್‌ಐಟಿ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ತಲೆ ಬುರುಡೆ ಹಿಡ್ಕೊಂಡು ಬಂದ ಮೇಲೆ ತನಿಖೆ ಮಾಡಲೇಬೇಕು. ಈ ಹಿನ್ನೆಲೆಯಲ್ಲಿ ಅನಾಮಿಕನ ತನಿಖೆ ನಡೆಯುತ್ತಿದೆ. ಕಾನೂನು ಪಾರದರ್ಶಕವಾಗಿದೆ. ಲಕ್ಷಾಂತರ ಜನರನ್ನ ಕರೆದುಕೊಂಡು ಹೋಗಿ ಧರ್ಮಸ್ಥಳದಲ್ಲಿ ಡ್ರಾಮಾ ಮಾಡುವುದು ನಮಗೂ ಗೊತ್ತಿದೆ. ಜೈ ಜೈ ಎನ್ನುವುದಲ್ಲ, ಸತ್ತಿರುವವರಿಗೆ ನ್ಯಾಯ ಕೊಡಿಸಬೇಕು. ಧರ್ಮಸ್ಥಳದವರು ಮಾಡಿದ್ದಾರಾ?, ಉತ್ತರ ಬೇಕಲ್ಲಾ? ಸೌಜನ್ಯ ರೇಪ್ ಆಗಿ ಸತ್ತಿರುವುದಲ್ಲವೇ, ಈ ಪ್ರಕರಣವನ್ನು ಏಕೆ ಮಂಜುನಾಥನಿಗೆ ಹೋಲಿಸುತ್ತಿದ್ದಾರೆ? ಅಣ್ಣಪ್ಪನ ಶಾಪ ಬಿಜೆಪಿಯವರಿಗೆ ತಟ್ಟುತ್ತದೆ ಎಂದು ಹೇಳಿದರು.

ಸತ್ತಿರುವ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಲು ಎಸ್‌ಐಟಿ ರಚನೆ ಆಗಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ತನಿಖೆ ಮಾಡಲಾಗುತ್ತಿದೆ. ಈಗ ನಾವು ಡ್ರಾಮಾ ಮಾಡಬೇಕಾ? ಧರ್ಮಸ್ಥಳ ಯಾತ್ರೆ ಮಾಡುತ್ತೇವೆಂದು ಸುಳ್ಳು ಹೇಳಬೇಕಾ? ಇದನ್ನು ಮಂಜುನಾಥಸ್ವಾಮಿ ಒಪ್ಪಲ್ಲ. ಬಿಜೆಪಿ ಈ ರೀತಿ ಡ್ರಾಮಾ ಮಾಡಿ ಚುನಾವಣೆಯಲ್ಲಿ ಸೋಲುತ್ತದೆ. ದೇವರ ಭಕ್ತಿ ಇದ್ದಿದ್ದರೆ ೨೫ ವರ್ಷ ಅಽಕಾರದಲ್ಲಿರಬೇಕಿತ್ತು. ಎಸ್‌ಐಟಿ ತನಿಖೆ ನಿಲ್ಲಿಸಿದರೆ ಮತ್ತೆ ಹೋರಾಟ ಮಾಡುತ್ತಾರೆ. ಬಿಜೆಪಿಯವರು ರಾಜಕಾರಣ ಮಾಡುತ್ತಾರೆ ಅಷ್ಟೆ. ಎಸ್‌ಐಟಿ ತನಿಖೆ ನಡೆಯುತ್ತಿದೆ, ರಾಜಕೀಯ ಬಿಟ್ಟು ಮಾತನಾಡಲಿ. ಧರ್ಮಸ್ಥಳದ ಬಗ್ಗೆ ಯಾವ ಪಕ್ಷವೂ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಚುನಾವಣೆಗೆ ಮುನ್ನ ನಾನೇ ಬಸ್ ವ್ಯವಸ್ಥೆ ಮಾಡಿ ಧರ್ಮಸ್ಥಳಕ್ಕೆ ಜನರನ್ನ ಕರೆದುಕೊಂಡು ಹೋಗಿದ್ದೆ. ಬಿಜೆಪಿಯವರಿಗೆ ನಾಟಕವೇ ಬಂಡವಾಳ. ದೇವಸ್ಥಾನ ತೋರಿಸುವುದು ಮತ ಕೇಳುವುದು. ದೇವರ ಶಾಪದಿಂದ ನೀವು ಸೋಲೋದು. ೨೦೨೩ರವರೆಗೆ ಅವರದೇ ಸರ್ಕಾರ ಇತ್ತು. ತನಿಖೆ ಮಾಡಲು ಎನ್‌ಐಎಗೆ ಏಕೆ ಅಮೆರಿಕಾ ಏಜೆನ್ಸಿಗೆ ಕೊಡಬಹುದಿತ್ತು. ಮಾಸ್ಕ್‌ಮ್ಯಾನ್ ಎಸ್‌ಐಟಿ ವಶದಲ್ಲಿದ್ದಾನೆ. ಮಹೇಶ್ ಶೆಟ್ಟಿ ಮನೆ ಮೇಲೆ ದಾಳಿ ಆಗಿದೆ. ಸಮೀರ್ ತನಿಖೆ ಆಗುತ್ತಿದೆ. ಕಾನೂನು ಎಲ್ಲರಿಗೂ ಒಂದೇ. ಮಂಜುನಾಥ ಸ್ವಾಮಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೇವೆಂದು ಬಿಜೆಪಿ ಬಹಿರಂಗವಾಗಿ ಹೇಳಲಿ. ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಬಿಜೆಪಿಯವರು ಸುಮ್ಮನೆ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

19 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

46 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

1 hour ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

5 hours ago