ಮಂಡ್ಯ

ಧರ್ಮಸ್ಥಳ ಎಲ್ಲರಿಗೂ ಸೇರಿದ್ದೇ ಹೊರತು ಕೇವಲ ಬಿಜೆಪಿಯವರಿಗೆ ಮಾತ್ರವಲ್ಲ : ಶಾಸಕ ಗಣಿಗ ರವಿಕುಮಾರ್

ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು.

ಮಾಧ್ಯಮದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟದ ವಿಚಾರಕ್ಕೆ ಮಾತನಾಡಿದ ಅವರು, ಧರ್ಮಸ್ಥಳ ಎಲ್ಲರಿಗೂ ಸೇರಿದ್ದು. ಕಾಂಗ್ರೆಸ್‌ನವರು ಕೂಡ ಧರ್ಮಸ್ಥಳ ಯಾತ್ರೆಗೆ ಹೋಗಿದ್ದೇವೆ. ೨೦೨೩ರವರೆಗೆ ಬಿಜೆಪಿ ಸರ್ಕಾರ ಇತ್ತು. ಸೌಜನ್ಯ ಸಾವು ಪ್ರಕರಣ ಬಿಜೆಪಿ ಆಡಳಿತಾವಧಿಯಲ್ಲೇ ಇತ್ತು. ಆರ್.ಅಶೋಕ್ ಗೃಹ ಸಚಿವರಾಗಿದ್ದರು. ಆಗ ಏಕೆ ತನಿಖೆ ನಡೆಸಲಿಲ್ಲ? ನಮಗೂ ರಾಜಕಾರಣ ಮಾಡುವುದಕ್ಕೆ ಬರುತ್ತದೆ. ಆದ್ದರಿಂದ ಬಿಜೆಪಿ ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು ಎಂದರು.

ಸೌಜನ್ಯ ಸತ್ತಿದ್ದಾರೆ, ಅದರ ತನಿಖೆ ಮಾಡಬೇಕಲ್ಲವೇ? ತನಿಖೆ ಮಾಡಿ ಎಂದು ಬಿಜೆಪಿಯವರೇ ಹೇಳಿದ್ದರು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕುಟುಂಬದವರೇ ಅವರೇ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿಯವರು ಎಸ್‌ಐಟಿ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ತಲೆ ಬುರುಡೆ ಹಿಡ್ಕೊಂಡು ಬಂದ ಮೇಲೆ ತನಿಖೆ ಮಾಡಲೇಬೇಕು. ಈ ಹಿನ್ನೆಲೆಯಲ್ಲಿ ಅನಾಮಿಕನ ತನಿಖೆ ನಡೆಯುತ್ತಿದೆ. ಕಾನೂನು ಪಾರದರ್ಶಕವಾಗಿದೆ. ಲಕ್ಷಾಂತರ ಜನರನ್ನ ಕರೆದುಕೊಂಡು ಹೋಗಿ ಧರ್ಮಸ್ಥಳದಲ್ಲಿ ಡ್ರಾಮಾ ಮಾಡುವುದು ನಮಗೂ ಗೊತ್ತಿದೆ. ಜೈ ಜೈ ಎನ್ನುವುದಲ್ಲ, ಸತ್ತಿರುವವರಿಗೆ ನ್ಯಾಯ ಕೊಡಿಸಬೇಕು. ಧರ್ಮಸ್ಥಳದವರು ಮಾಡಿದ್ದಾರಾ?, ಉತ್ತರ ಬೇಕಲ್ಲಾ? ಸೌಜನ್ಯ ರೇಪ್ ಆಗಿ ಸತ್ತಿರುವುದಲ್ಲವೇ, ಈ ಪ್ರಕರಣವನ್ನು ಏಕೆ ಮಂಜುನಾಥನಿಗೆ ಹೋಲಿಸುತ್ತಿದ್ದಾರೆ? ಅಣ್ಣಪ್ಪನ ಶಾಪ ಬಿಜೆಪಿಯವರಿಗೆ ತಟ್ಟುತ್ತದೆ ಎಂದು ಹೇಳಿದರು.

ಸತ್ತಿರುವ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಲು ಎಸ್‌ಐಟಿ ರಚನೆ ಆಗಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ತನಿಖೆ ಮಾಡಲಾಗುತ್ತಿದೆ. ಈಗ ನಾವು ಡ್ರಾಮಾ ಮಾಡಬೇಕಾ? ಧರ್ಮಸ್ಥಳ ಯಾತ್ರೆ ಮಾಡುತ್ತೇವೆಂದು ಸುಳ್ಳು ಹೇಳಬೇಕಾ? ಇದನ್ನು ಮಂಜುನಾಥಸ್ವಾಮಿ ಒಪ್ಪಲ್ಲ. ಬಿಜೆಪಿ ಈ ರೀತಿ ಡ್ರಾಮಾ ಮಾಡಿ ಚುನಾವಣೆಯಲ್ಲಿ ಸೋಲುತ್ತದೆ. ದೇವರ ಭಕ್ತಿ ಇದ್ದಿದ್ದರೆ ೨೫ ವರ್ಷ ಅಽಕಾರದಲ್ಲಿರಬೇಕಿತ್ತು. ಎಸ್‌ಐಟಿ ತನಿಖೆ ನಿಲ್ಲಿಸಿದರೆ ಮತ್ತೆ ಹೋರಾಟ ಮಾಡುತ್ತಾರೆ. ಬಿಜೆಪಿಯವರು ರಾಜಕಾರಣ ಮಾಡುತ್ತಾರೆ ಅಷ್ಟೆ. ಎಸ್‌ಐಟಿ ತನಿಖೆ ನಡೆಯುತ್ತಿದೆ, ರಾಜಕೀಯ ಬಿಟ್ಟು ಮಾತನಾಡಲಿ. ಧರ್ಮಸ್ಥಳದ ಬಗ್ಗೆ ಯಾವ ಪಕ್ಷವೂ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಚುನಾವಣೆಗೆ ಮುನ್ನ ನಾನೇ ಬಸ್ ವ್ಯವಸ್ಥೆ ಮಾಡಿ ಧರ್ಮಸ್ಥಳಕ್ಕೆ ಜನರನ್ನ ಕರೆದುಕೊಂಡು ಹೋಗಿದ್ದೆ. ಬಿಜೆಪಿಯವರಿಗೆ ನಾಟಕವೇ ಬಂಡವಾಳ. ದೇವಸ್ಥಾನ ತೋರಿಸುವುದು ಮತ ಕೇಳುವುದು. ದೇವರ ಶಾಪದಿಂದ ನೀವು ಸೋಲೋದು. ೨೦೨೩ರವರೆಗೆ ಅವರದೇ ಸರ್ಕಾರ ಇತ್ತು. ತನಿಖೆ ಮಾಡಲು ಎನ್‌ಐಎಗೆ ಏಕೆ ಅಮೆರಿಕಾ ಏಜೆನ್ಸಿಗೆ ಕೊಡಬಹುದಿತ್ತು. ಮಾಸ್ಕ್‌ಮ್ಯಾನ್ ಎಸ್‌ಐಟಿ ವಶದಲ್ಲಿದ್ದಾನೆ. ಮಹೇಶ್ ಶೆಟ್ಟಿ ಮನೆ ಮೇಲೆ ದಾಳಿ ಆಗಿದೆ. ಸಮೀರ್ ತನಿಖೆ ಆಗುತ್ತಿದೆ. ಕಾನೂನು ಎಲ್ಲರಿಗೂ ಒಂದೇ. ಮಂಜುನಾಥ ಸ್ವಾಮಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೇವೆಂದು ಬಿಜೆಪಿ ಬಹಿರಂಗವಾಗಿ ಹೇಳಲಿ. ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಬಿಜೆಪಿಯವರು ಸುಮ್ಮನೆ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

3 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

4 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

4 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

5 hours ago