Dharmasthala case | Protest demanding impartial SIT investigation.
ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ ಮನಸುಳ್ಳ ನಾಗರಿಕ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಅಪರಾಽಗಳಿಗೆ ಶಿಕ್ಷೆಯಾಗಬೇಕೆಂದು ಘೋಷಣೆ ಕೂಗಿದರು.
ಪ್ರಕರಣಗಳಿಗೆ ಬಗ್ಗೆ ಸಾಕ್ಷ್ಯಾಧಾರದೊಂದಿಗೆ ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ, ಈ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಲಾಢ್ಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಈ ಹಿಂದಿನ ಸರ್ಕಾರಗಳು ಇದರ ವಿಚಾರದಲ್ಲಿ ದಿಟ್ಟ ನಿಲುವು ತಾಳಲು ಹಿಂಜರಿದಿರುವ ಇತಿಹಾಸವನ್ನು ನೆನಪಿಸಿಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.
ಸಾಕ್ಷ್ಯ ಒದಗಿಸಲು ಮುಂದೆ ಬಂದಿರುವ ವ್ಯಕ್ತಿಗೆ ಮತ್ತು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕು. ಈ ಸಾಕ್ಷಿಯು ೧೯೯೫ ರಿಂದ ೨೦೧೪ ರವರೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ಇವರ ಸುರಕ್ಷತೆಯನ್ನು ಖಾತರಿಪಡಿಸಲು ೨೦೧೮ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಆಗಾಗ್ಗೆ ಹೊರಬಂದಿರುವ ಇಂತಹ ಆರೋಪಗಳ ಬಗ್ಗೆ ನಾಡಿನ ಚಳವಳಿಗಳು ಸುದೀರ್ಘ ಹೋರಾಟಗಳನ್ನು ನಡೆಸಿವೆ. ಆದರೆ ಸುಮಾರು ಮೂರು ದಶಕಗಳ ಹಿಂದೆ ನಡೆದ ಪದ್ಮಲತಾ ಪ್ರಕರಣದಿಂದ ಹಿಡಿದು, ಆನೆ ಮಾವುತನ ಪ್ರಕರಣ, ಸೌಜನ್ಯಾ ಪ್ರಕರಣ ಮುಂತಾದ ಯಾವುದೇ ಘಟನೆಗಳಲ್ಲಿ ಆಡಳಿತದಲ್ಲಿದ್ದ ಸರ್ಕಾರಗಳು ಕ್ರಮ ತೆಗೆದುಕೊಳ್ಳದಿರುವುದಕ್ಕೆ ದೊಡ್ಡ ದುರಂತ ಸಾವಿಗೆ ಕಾರಣ ಎಂದು ಕಿಡಿಕಾರಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಸಂಘಟನೆಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಬಿ.ಟಿ.ವಿಶ್ವನಾಥ್, ಎಂ.ಸಿದ್ದರಾಜು, ಲತಾ ಶಂಕರ್, ಸೋಮಶೇಖರ್, ಕೆ.ಮಹಮದ್, ಇಂಪನಾ, ಪೂರ್ಣಿಮಾ, ಎಂ.ವಿ.ಕೃಷ್ಣ ಮಳವಳ್ಳಿ, ನಾಗೇಶ್, ಜ್ಯೋತಿ, ಮುತ್ತಮ್ಮ, ಪಂಕಜಾ, ಮಂಜುಳಾ, ಸುಬ್ರಹ್ಮಣ್ಯ, ರೇಣುಕಾ, ನಾಗರತ್ನ ಇತರರು ಭಾಗವಹಿಸಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…