ಮಂಡ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ ಮನಸುಳ್ಳ ನಾಗರಿಕ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಅಪರಾಽಗಳಿಗೆ ಶಿಕ್ಷೆಯಾಗಬೇಕೆಂದು ಘೋಷಣೆ ಕೂಗಿದರು.

ಪ್ರಕರಣಗಳಿಗೆ ಬಗ್ಗೆ ಸಾಕ್ಷ್ಯಾಧಾರದೊಂದಿಗೆ ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ, ಈ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಲಾಢ್ಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಈ ಹಿಂದಿನ ಸರ್ಕಾರಗಳು ಇದರ ವಿಚಾರದಲ್ಲಿ ದಿಟ್ಟ ನಿಲುವು ತಾಳಲು ಹಿಂಜರಿದಿರುವ ಇತಿಹಾಸವನ್ನು ನೆನಪಿಸಿಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಸಾಕ್ಷ್ಯ ಒದಗಿಸಲು ಮುಂದೆ ಬಂದಿರುವ ವ್ಯಕ್ತಿಗೆ ಮತ್ತು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕು. ಈ ಸಾಕ್ಷಿಯು ೧೯೯೫ ರಿಂದ ೨೦೧೪ ರವರೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ಇವರ ಸುರಕ್ಷತೆಯನ್ನು ಖಾತರಿಪಡಿಸಲು ೨೦೧೮ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಆಗಾಗ್ಗೆ ಹೊರಬಂದಿರುವ ಇಂತಹ ಆರೋಪಗಳ ಬಗ್ಗೆ ನಾಡಿನ ಚಳವಳಿಗಳು ಸುದೀರ್ಘ ಹೋರಾಟಗಳನ್ನು ನಡೆಸಿವೆ. ಆದರೆ ಸುಮಾರು ಮೂರು ದಶಕಗಳ ಹಿಂದೆ ನಡೆದ ಪದ್ಮಲತಾ ಪ್ರಕರಣದಿಂದ ಹಿಡಿದು, ಆನೆ ಮಾವುತನ ಪ್ರಕರಣ, ಸೌಜನ್ಯಾ ಪ್ರಕರಣ ಮುಂತಾದ ಯಾವುದೇ ಘಟನೆಗಳಲ್ಲಿ ಆಡಳಿತದಲ್ಲಿದ್ದ ಸರ್ಕಾರಗಳು ಕ್ರಮ ತೆಗೆದುಕೊಳ್ಳದಿರುವುದಕ್ಕೆ ದೊಡ್ಡ ದುರಂತ ಸಾವಿಗೆ ಕಾರಣ ಎಂದು ಕಿಡಿಕಾರಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಬಿ.ಟಿ.ವಿಶ್ವನಾಥ್, ಎಂ.ಸಿದ್ದರಾಜು, ಲತಾ ಶಂಕರ್, ಸೋಮಶೇಖರ್, ಕೆ.ಮಹಮದ್, ಇಂಪನಾ, ಪೂರ್ಣಿಮಾ, ಎಂ.ವಿ.ಕೃಷ್ಣ ಮಳವಳ್ಳಿ, ನಾಗೇಶ್, ಜ್ಯೋತಿ, ಮುತ್ತಮ್ಮ, ಪಂಕಜಾ, ಮಂಜುಳಾ, ಸುಬ್ರಹ್ಮಣ್ಯ, ರೇಣುಕಾ, ನಾಗರತ್ನ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

13 mins ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

39 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

1 hour ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

2 hours ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago