ಮಂಡ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ ಮನಸುಳ್ಳ ನಾಗರಿಕ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಅಪರಾಽಗಳಿಗೆ ಶಿಕ್ಷೆಯಾಗಬೇಕೆಂದು ಘೋಷಣೆ ಕೂಗಿದರು.

ಪ್ರಕರಣಗಳಿಗೆ ಬಗ್ಗೆ ಸಾಕ್ಷ್ಯಾಧಾರದೊಂದಿಗೆ ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ, ಈ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಲಾಢ್ಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಈ ಹಿಂದಿನ ಸರ್ಕಾರಗಳು ಇದರ ವಿಚಾರದಲ್ಲಿ ದಿಟ್ಟ ನಿಲುವು ತಾಳಲು ಹಿಂಜರಿದಿರುವ ಇತಿಹಾಸವನ್ನು ನೆನಪಿಸಿಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಸಾಕ್ಷ್ಯ ಒದಗಿಸಲು ಮುಂದೆ ಬಂದಿರುವ ವ್ಯಕ್ತಿಗೆ ಮತ್ತು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕು. ಈ ಸಾಕ್ಷಿಯು ೧೯೯೫ ರಿಂದ ೨೦೧೪ ರವರೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ಇವರ ಸುರಕ್ಷತೆಯನ್ನು ಖಾತರಿಪಡಿಸಲು ೨೦೧೮ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಆಗಾಗ್ಗೆ ಹೊರಬಂದಿರುವ ಇಂತಹ ಆರೋಪಗಳ ಬಗ್ಗೆ ನಾಡಿನ ಚಳವಳಿಗಳು ಸುದೀರ್ಘ ಹೋರಾಟಗಳನ್ನು ನಡೆಸಿವೆ. ಆದರೆ ಸುಮಾರು ಮೂರು ದಶಕಗಳ ಹಿಂದೆ ನಡೆದ ಪದ್ಮಲತಾ ಪ್ರಕರಣದಿಂದ ಹಿಡಿದು, ಆನೆ ಮಾವುತನ ಪ್ರಕರಣ, ಸೌಜನ್ಯಾ ಪ್ರಕರಣ ಮುಂತಾದ ಯಾವುದೇ ಘಟನೆಗಳಲ್ಲಿ ಆಡಳಿತದಲ್ಲಿದ್ದ ಸರ್ಕಾರಗಳು ಕ್ರಮ ತೆಗೆದುಕೊಳ್ಳದಿರುವುದಕ್ಕೆ ದೊಡ್ಡ ದುರಂತ ಸಾವಿಗೆ ಕಾರಣ ಎಂದು ಕಿಡಿಕಾರಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಬಿ.ಟಿ.ವಿಶ್ವನಾಥ್, ಎಂ.ಸಿದ್ದರಾಜು, ಲತಾ ಶಂಕರ್, ಸೋಮಶೇಖರ್, ಕೆ.ಮಹಮದ್, ಇಂಪನಾ, ಪೂರ್ಣಿಮಾ, ಎಂ.ವಿ.ಕೃಷ್ಣ ಮಳವಳ್ಳಿ, ನಾಗೇಶ್, ಜ್ಯೋತಿ, ಮುತ್ತಮ್ಮ, ಪಂಕಜಾ, ಮಂಜುಳಾ, ಸುಬ್ರಹ್ಮಣ್ಯ, ರೇಣುಕಾ, ನಾಗರತ್ನ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago