ಮಂಡ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ ಮನಸುಳ್ಳ ನಾಗರಿಕ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಅಪರಾಽಗಳಿಗೆ ಶಿಕ್ಷೆಯಾಗಬೇಕೆಂದು ಘೋಷಣೆ ಕೂಗಿದರು.

ಪ್ರಕರಣಗಳಿಗೆ ಬಗ್ಗೆ ಸಾಕ್ಷ್ಯಾಧಾರದೊಂದಿಗೆ ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ, ಈ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಲಾಢ್ಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಈ ಹಿಂದಿನ ಸರ್ಕಾರಗಳು ಇದರ ವಿಚಾರದಲ್ಲಿ ದಿಟ್ಟ ನಿಲುವು ತಾಳಲು ಹಿಂಜರಿದಿರುವ ಇತಿಹಾಸವನ್ನು ನೆನಪಿಸಿಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಸಾಕ್ಷ್ಯ ಒದಗಿಸಲು ಮುಂದೆ ಬಂದಿರುವ ವ್ಯಕ್ತಿಗೆ ಮತ್ತು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕು. ಈ ಸಾಕ್ಷಿಯು ೧೯೯೫ ರಿಂದ ೨೦೧೪ ರವರೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ಇವರ ಸುರಕ್ಷತೆಯನ್ನು ಖಾತರಿಪಡಿಸಲು ೨೦೧೮ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಆಗಾಗ್ಗೆ ಹೊರಬಂದಿರುವ ಇಂತಹ ಆರೋಪಗಳ ಬಗ್ಗೆ ನಾಡಿನ ಚಳವಳಿಗಳು ಸುದೀರ್ಘ ಹೋರಾಟಗಳನ್ನು ನಡೆಸಿವೆ. ಆದರೆ ಸುಮಾರು ಮೂರು ದಶಕಗಳ ಹಿಂದೆ ನಡೆದ ಪದ್ಮಲತಾ ಪ್ರಕರಣದಿಂದ ಹಿಡಿದು, ಆನೆ ಮಾವುತನ ಪ್ರಕರಣ, ಸೌಜನ್ಯಾ ಪ್ರಕರಣ ಮುಂತಾದ ಯಾವುದೇ ಘಟನೆಗಳಲ್ಲಿ ಆಡಳಿತದಲ್ಲಿದ್ದ ಸರ್ಕಾರಗಳು ಕ್ರಮ ತೆಗೆದುಕೊಳ್ಳದಿರುವುದಕ್ಕೆ ದೊಡ್ಡ ದುರಂತ ಸಾವಿಗೆ ಕಾರಣ ಎಂದು ಕಿಡಿಕಾರಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಬಿ.ಟಿ.ವಿಶ್ವನಾಥ್, ಎಂ.ಸಿದ್ದರಾಜು, ಲತಾ ಶಂಕರ್, ಸೋಮಶೇಖರ್, ಕೆ.ಮಹಮದ್, ಇಂಪನಾ, ಪೂರ್ಣಿಮಾ, ಎಂ.ವಿ.ಕೃಷ್ಣ ಮಳವಳ್ಳಿ, ನಾಗೇಶ್, ಜ್ಯೋತಿ, ಮುತ್ತಮ್ಮ, ಪಂಕಜಾ, ಮಂಜುಳಾ, ಸುಬ್ರಹ್ಮಣ್ಯ, ರೇಣುಕಾ, ನಾಗರತ್ನ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago