ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ.
ನಾಗಮಂಗಲದಲ್ಲಿ ತನ್ನ ತಾಯಿಯ ಜತೆ ವಾಸವಾಗಿರುವ ರತ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ತಾಲ್ಲೂಕು ಚಿಕ್ಕಬಳ್ಳಿ ಗ್ರಾಮದವನಾದ ಆತ (ಮಾಸ್ಕ್ ಮ್ಯಾನ್) ನನ್ನನ್ನು ವಿವಾಹವಾಗಿ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದನು. ಅವನು ಹೇಳಿರುವಂತೆ ನೂರಾರು ಶವಗಳನ್ನು ಹೂತಿಲ್ಲ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ವಾಸವಿದ್ದಾಗಲೇ ನಮಗೆ ಇಬ್ಬರು ಮಕ್ಕಳಾದವು. ನಂತರದಲ್ಲಿ ದಿನಂಪ್ರತಿ ಜಗಳವಾಡುತ್ತಿದ್ದನು, ಇದರಿಂದಾಗಿ ಧರ್ಮಸ್ಥಳದಿಂದ ನನ್ನನ್ನು ಕರೆದುಕೊಂಡು ಬಂದು ನನ್ನ ತವರು ಮನೆಗೆ ಬಿಟ್ಟು ಹೋಗಿ ೧೮ ವರ್ಷಗಳೇ ಕಳೆದವು. ಆಗ ಹೋದವನು ವಾಪಸ್ಸಾಗಲಿಲ್ಲ.
ಕೆಲ ವರ್ಷಗಳ ಹಿಂದೆ ಆತ ಇನ್ನೊಂದು ಮದುವೆಯಾಗಿರುವ ವಿಷಯ ತಿಳಿದು ನನ್ನ ಜೀವನಾಂಶಕ್ಕೆ ಹಣ ನೀಡಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿ, ಆತ ನನಗೆ ಯಾವುದೇ ಆಸ್ತಿ ಇಲ್ಲ, ಧರ್ಮಸ್ಥಳದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ, ನನಗೇ ಸಾಲುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ನನಗೆ ಹಣ ನೀಡಿಲ್ಲ.
ಮದುವೆಯಾದ ನನ್ನನ್ನು ಹಾಗೂ ಇಬ್ಬರು ಮಕ್ಕಳನ್ನು ಬಾಳಿಸದ ಆತ, ಯಾರದೋ ಮಾತನ್ನು ಕೇಳಿಕೊಂಡು ಪವಿತ್ರ ಪುಣ್ಯ ಕ್ಷೇತ್ರವಾದ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಗೆ ಕಳಂಕ ತಂದಿದ್ದಾನೆ. ಅವನು ಮಾಡುತ್ತಿರುವುದು ಬಹಳ ತಪ್ಪು ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…