ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ.
ನಾಗಮಂಗಲದಲ್ಲಿ ತನ್ನ ತಾಯಿಯ ಜತೆ ವಾಸವಾಗಿರುವ ರತ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ತಾಲ್ಲೂಕು ಚಿಕ್ಕಬಳ್ಳಿ ಗ್ರಾಮದವನಾದ ಆತ (ಮಾಸ್ಕ್ ಮ್ಯಾನ್) ನನ್ನನ್ನು ವಿವಾಹವಾಗಿ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದನು. ಅವನು ಹೇಳಿರುವಂತೆ ನೂರಾರು ಶವಗಳನ್ನು ಹೂತಿಲ್ಲ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ವಾಸವಿದ್ದಾಗಲೇ ನಮಗೆ ಇಬ್ಬರು ಮಕ್ಕಳಾದವು. ನಂತರದಲ್ಲಿ ದಿನಂಪ್ರತಿ ಜಗಳವಾಡುತ್ತಿದ್ದನು, ಇದರಿಂದಾಗಿ ಧರ್ಮಸ್ಥಳದಿಂದ ನನ್ನನ್ನು ಕರೆದುಕೊಂಡು ಬಂದು ನನ್ನ ತವರು ಮನೆಗೆ ಬಿಟ್ಟು ಹೋಗಿ ೧೮ ವರ್ಷಗಳೇ ಕಳೆದವು. ಆಗ ಹೋದವನು ವಾಪಸ್ಸಾಗಲಿಲ್ಲ.
ಕೆಲ ವರ್ಷಗಳ ಹಿಂದೆ ಆತ ಇನ್ನೊಂದು ಮದುವೆಯಾಗಿರುವ ವಿಷಯ ತಿಳಿದು ನನ್ನ ಜೀವನಾಂಶಕ್ಕೆ ಹಣ ನೀಡಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿ, ಆತ ನನಗೆ ಯಾವುದೇ ಆಸ್ತಿ ಇಲ್ಲ, ಧರ್ಮಸ್ಥಳದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ, ನನಗೇ ಸಾಲುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ನನಗೆ ಹಣ ನೀಡಿಲ್ಲ.
ಮದುವೆಯಾದ ನನ್ನನ್ನು ಹಾಗೂ ಇಬ್ಬರು ಮಕ್ಕಳನ್ನು ಬಾಳಿಸದ ಆತ, ಯಾರದೋ ಮಾತನ್ನು ಕೇಳಿಕೊಂಡು ಪವಿತ್ರ ಪುಣ್ಯ ಕ್ಷೇತ್ರವಾದ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಗೆ ಕಳಂಕ ತಂದಿದ್ದಾನೆ. ಅವನು ಮಾಡುತ್ತಿರುವುದು ಬಹಳ ತಪ್ಪು ಎಂದು ಹೇಳಿದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…