ಮಂಡ್ಯ

ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಪತ್ನಿ ಎನ್ನಲಾದ ಮಹಿಳೆ ಹೇಳಿದ್ದೇನು?

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್‌ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ.

ನಾಗಮಂಗಲದಲ್ಲಿ ತನ್ನ ತಾಯಿಯ ಜತೆ ವಾಸವಾಗಿರುವ ರತ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ತಾಲ್ಲೂಕು ಚಿಕ್ಕಬಳ್ಳಿ ಗ್ರಾಮದವನಾದ ಆತ (ಮಾಸ್ಕ್ ಮ್ಯಾನ್) ನನ್ನನ್ನು ವಿವಾಹವಾಗಿ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದನು. ಅವನು ಹೇಳಿರುವಂತೆ ನೂರಾರು ಶವಗಳನ್ನು ಹೂತಿಲ್ಲ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ವಾಸವಿದ್ದಾಗಲೇ ನಮಗೆ ಇಬ್ಬರು ಮಕ್ಕಳಾದವು. ನಂತರದಲ್ಲಿ ದಿನಂಪ್ರತಿ ಜಗಳವಾಡುತ್ತಿದ್ದನು, ಇದರಿಂದಾಗಿ ಧರ್ಮಸ್ಥಳದಿಂದ ನನ್ನನ್ನು ಕರೆದುಕೊಂಡು ಬಂದು ನನ್ನ ತವರು ಮನೆಗೆ ಬಿಟ್ಟು ಹೋಗಿ ೧೮ ವರ್ಷಗಳೇ ಕಳೆದವು. ಆಗ ಹೋದವನು ವಾಪಸ್ಸಾಗಲಿಲ್ಲ.

ಕೆಲ ವರ್ಷಗಳ ಹಿಂದೆ ಆತ ಇನ್ನೊಂದು ಮದುವೆಯಾಗಿರುವ ವಿಷಯ ತಿಳಿದು ನನ್ನ ಜೀವನಾಂಶಕ್ಕೆ ಹಣ ನೀಡಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿ, ಆತ ನನಗೆ ಯಾವುದೇ ಆಸ್ತಿ ಇಲ್ಲ, ಧರ್ಮಸ್ಥಳದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ, ನನಗೇ ಸಾಲುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ನನಗೆ ಹಣ ನೀಡಿಲ್ಲ.

ಮದುವೆಯಾದ ನನ್ನನ್ನು ಹಾಗೂ ಇಬ್ಬರು ಮಕ್ಕಳನ್ನು ಬಾಳಿಸದ ಆತ, ಯಾರದೋ ಮಾತನ್ನು ಕೇಳಿಕೊಂಡು ಪವಿತ್ರ ಪುಣ್ಯ ಕ್ಷೇತ್ರವಾದ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಗೆ ಕಳಂಕ ತಂದಿದ್ದಾನೆ. ಅವನು ಮಾಡುತ್ತಿರುವುದು ಬಹಳ ತಪ್ಪು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago