ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ.
ನಾಗಮಂಗಲದಲ್ಲಿ ತನ್ನ ತಾಯಿಯ ಜತೆ ವಾಸವಾಗಿರುವ ರತ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ತಾಲ್ಲೂಕು ಚಿಕ್ಕಬಳ್ಳಿ ಗ್ರಾಮದವನಾದ ಆತ (ಮಾಸ್ಕ್ ಮ್ಯಾನ್) ನನ್ನನ್ನು ವಿವಾಹವಾಗಿ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದನು. ಅವನು ಹೇಳಿರುವಂತೆ ನೂರಾರು ಶವಗಳನ್ನು ಹೂತಿಲ್ಲ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ವಾಸವಿದ್ದಾಗಲೇ ನಮಗೆ ಇಬ್ಬರು ಮಕ್ಕಳಾದವು. ನಂತರದಲ್ಲಿ ದಿನಂಪ್ರತಿ ಜಗಳವಾಡುತ್ತಿದ್ದನು, ಇದರಿಂದಾಗಿ ಧರ್ಮಸ್ಥಳದಿಂದ ನನ್ನನ್ನು ಕರೆದುಕೊಂಡು ಬಂದು ನನ್ನ ತವರು ಮನೆಗೆ ಬಿಟ್ಟು ಹೋಗಿ ೧೮ ವರ್ಷಗಳೇ ಕಳೆದವು. ಆಗ ಹೋದವನು ವಾಪಸ್ಸಾಗಲಿಲ್ಲ.
ಕೆಲ ವರ್ಷಗಳ ಹಿಂದೆ ಆತ ಇನ್ನೊಂದು ಮದುವೆಯಾಗಿರುವ ವಿಷಯ ತಿಳಿದು ನನ್ನ ಜೀವನಾಂಶಕ್ಕೆ ಹಣ ನೀಡಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿ, ಆತ ನನಗೆ ಯಾವುದೇ ಆಸ್ತಿ ಇಲ್ಲ, ಧರ್ಮಸ್ಥಳದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ, ನನಗೇ ಸಾಲುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ನನಗೆ ಹಣ ನೀಡಿಲ್ಲ.
ಮದುವೆಯಾದ ನನ್ನನ್ನು ಹಾಗೂ ಇಬ್ಬರು ಮಕ್ಕಳನ್ನು ಬಾಳಿಸದ ಆತ, ಯಾರದೋ ಮಾತನ್ನು ಕೇಳಿಕೊಂಡು ಪವಿತ್ರ ಪುಣ್ಯ ಕ್ಷೇತ್ರವಾದ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಗೆ ಕಳಂಕ ತಂದಿದ್ದಾನೆ. ಅವನು ಮಾಡುತ್ತಿರುವುದು ಬಹಳ ತಪ್ಪು ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…