ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ.
ನಾಗಮಂಗಲದಲ್ಲಿ ತನ್ನ ತಾಯಿಯ ಜತೆ ವಾಸವಾಗಿರುವ ರತ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ತಾಲ್ಲೂಕು ಚಿಕ್ಕಬಳ್ಳಿ ಗ್ರಾಮದವನಾದ ಆತ (ಮಾಸ್ಕ್ ಮ್ಯಾನ್) ನನ್ನನ್ನು ವಿವಾಹವಾಗಿ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದನು. ಅವನು ಹೇಳಿರುವಂತೆ ನೂರಾರು ಶವಗಳನ್ನು ಹೂತಿಲ್ಲ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ವಾಸವಿದ್ದಾಗಲೇ ನಮಗೆ ಇಬ್ಬರು ಮಕ್ಕಳಾದವು. ನಂತರದಲ್ಲಿ ದಿನಂಪ್ರತಿ ಜಗಳವಾಡುತ್ತಿದ್ದನು, ಇದರಿಂದಾಗಿ ಧರ್ಮಸ್ಥಳದಿಂದ ನನ್ನನ್ನು ಕರೆದುಕೊಂಡು ಬಂದು ನನ್ನ ತವರು ಮನೆಗೆ ಬಿಟ್ಟು ಹೋಗಿ ೧೮ ವರ್ಷಗಳೇ ಕಳೆದವು. ಆಗ ಹೋದವನು ವಾಪಸ್ಸಾಗಲಿಲ್ಲ.
ಕೆಲ ವರ್ಷಗಳ ಹಿಂದೆ ಆತ ಇನ್ನೊಂದು ಮದುವೆಯಾಗಿರುವ ವಿಷಯ ತಿಳಿದು ನನ್ನ ಜೀವನಾಂಶಕ್ಕೆ ಹಣ ನೀಡಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿ, ಆತ ನನಗೆ ಯಾವುದೇ ಆಸ್ತಿ ಇಲ್ಲ, ಧರ್ಮಸ್ಥಳದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ, ನನಗೇ ಸಾಲುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ನನಗೆ ಹಣ ನೀಡಿಲ್ಲ.
ಮದುವೆಯಾದ ನನ್ನನ್ನು ಹಾಗೂ ಇಬ್ಬರು ಮಕ್ಕಳನ್ನು ಬಾಳಿಸದ ಆತ, ಯಾರದೋ ಮಾತನ್ನು ಕೇಳಿಕೊಂಡು ಪವಿತ್ರ ಪುಣ್ಯ ಕ್ಷೇತ್ರವಾದ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಗೆ ಕಳಂಕ ತಂದಿದ್ದಾನೆ. ಅವನು ಮಾಡುತ್ತಿರುವುದು ಬಹಳ ತಪ್ಪು ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…
ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…