ಮಂಡ್ಯ

ಶ್ರೀರಂಗಪಟ್ಟಣ ದಸರಾ ಉದ್ಘಾಟಿಸಲಿರುವ ನಿರ್ದೇಶಕ ನಾಗಭರಣ : 25 ರಂದು ಉದ್ಘಾಟನೆ

ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣ ದಸರಾ ಅಚ್ಚಕಟ್ಟಾಗಿ, ಅದ್ದೂರಿಯಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರ ವರ್ಗಾವಣೆಗೂ ಗಣೇಶ ವಿಸರ್ಜನೆ ಸಮಯದಲ್ಲಿ ಉಂಟಾದ ಗಲಭೆಗೂ ಸಂಬಂಧವಿಲ್ಲ. ಕಳೆದ ಆರು ತಿಂಗಳ ಹಿಂದೆಯೇ ಅವರ ಅವಧಿ ಮುಕ್ತಾಯಗೊಂಡಿತ್ತು. ಆವಾಗ ಸ್ವತಃ ನಾನೇ ಗೃಹ ಮಂತ್ರಿಗಳ ಜೊತೆ ಮಾತನಾಡಿ ಜಿಲ್ಲೆಯಲ್ಲಿಯೇ ಮುಂದುವರಿಸಲು ಬೇಡಿಕೆ ಇಟ್ಟಿದೆ ಅಷ್ಟರಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ ಆದರಿಂದ ಅವರು ವರ್ಗಾವಣೆಯಾಗಿದೆ ಎಂದು ತಿಳಿಸಿದರು.

ಇದನ್ನು ಓದಿ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿಗೆ ಗೊತ್ತಾ?

ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ಬಿಡುವುದಿಲ್ಲ ಬಿ.ಜೆ.ಪಿ, ಜೆಡಿಎಸ್ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ. ಈಗ ಪರಿಸ್ಥಿತಿ ಹತೋಟಿಯಲ್ಲಿ ಇದೆ. ಮದ್ದೂರಿನಲ್ಲಿ ನಡೆದಂತಹ ಗಲಭೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ನೆನ್ನೆ ಮಳವಳ್ಳಿಯಲ್ಲೂ ಸಹ ಬಂದ್ ನಡೆದಿದೆ ಅಲ್ಲೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಇನ್ನೂ ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದ 21 ಜನರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಅದರ ಹಿಂದೆ ನಡೆದಿರುವ ಘಟನೆಗಳ ಕುರಿತು ತನಿಖೆಯ ನಂತರ ತಿಳಿಯುತ್ತದೆ. ನಾಗಮಂಗಲ ಗಲಭೆಯಲ್ಲೂ ಸಹ ಸಂಬಂಧಪಟ್ಟವರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ ಪ್ರಸ್ತುತ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಓಲೈಕೆ ಪ್ರಶ್ನೆ ಇಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago