ಮಂಡ್ಯ

ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ: ಸಚಿವ ಎನ್‌. ಚೆಲುವರಾಯಸ್ವಾಮಿ

ಮಂಡ್ಯ: ಹೊಸ ಪೀಳಿಗೆಯು ಸಂವಿಧಾನದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಾದಿದೆ ಎಂದು ಕೃಷಿ ಸಚಿವ ಎನ್‌. ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ.

75ನೇ ಸಂವಿಧಾನ ಅಮೃತ ಮಹೋತ್ಸವ ಆಚರಣೆ ಮತ್ತು ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಹಿತ ದೃಷ್ಟಿಯಿಂದ ನಾವು ಸಾರ್ವಜನಿಕರನ್ನ, ಮಹಿಳೆಯರನ್ನ, ಯುವಕರನ್ನ ಭಾರತ ದೇಶದ ಇತಿಹಾಸದತ್ತ ತಿರುಗಿಸಬೇಕಿದೆ ಎಂದು ನುಡಿದರು.

ನಮ್ಮ ಕಾಲ ಮುಗಿಯುತ್ತ ಬಂದಿದೆ ನಮ್ಮ ಹಿಂದೆ ಬರುವಂತಹ ಹೊಸ ಪೀಳಿಗೆಗೆ ಅನಾಹುತ ಕಾದಿದೆ ಆದ್ದರಿಂದ ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳಬೇಕು. ಈ ದೇಶದ ಸಂವಿಧಾನ ಬಹಳ ಮುಖ್ಯ ಬಹು:ಶ ಎಲ್ಲಾ ಗ್ರಂಥಗಳಿಗಿಂತಲೂ ಶ್ರೇಷ್ಠವಾಗಿದೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ನಾಗರಿಕರಿಗೂ ಶಕ್ತಿ ತುಂಬುವ ಗ್ರಂಥ ಸಂವಿಧಾನವಾಗಿದೆ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರನ್ನು ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ ನಂತರ ಸಂವಿಧಾನ ದಲಿತರಿಗೆ ಮಾತ್ರ ಸಂಬಂಧಪಟ್ಟದ್ದು ಎಂದು ತಿಳಿದುಕೊಳ್ಳುವುದು ತಪ್ಪಾಗುತ್ತದೆ. ಸಾರ್ವಜನಿಕರು ಮತ್ತು ಅತ್ಯಂತ ಕಡು ಬಡವರು ಯಾವುದೇ ಹಣಬಲ ಜನ ಬಲ ಅಧಿಕಾರ ಬಲ ಇಲ್ಲದಿದ್ದರೂ ತೊಡೆತಟ್ಟಲು ಶಕ್ತಿ ತುಂಬುವುದು ಸಂವಿಧಾನ ಎಂದು ಹೇಳಿದರು.

ಏನೂ ಇಲ್ಲದಂತಹ ಒಬ್ಬ ಸಾಮಾನ್ಯ ವ್ಯಕ್ತಿಯು ತನ್ನ ಘನತೆ ವಿಶ್ವಾಸ ಗೌರವ ಸ್ವಾಭಿಮಾನಕ್ಕೆ ಧಕ್ಕೆ ಆದರೆ ಗಟ್ಟಿಯಾಗಿ ಧ್ವನಿ ಎತ್ತಲು ಶಕ್ತಿ ತುಂಬುವುದು ಸಂವಿಧಾನವಾಗಿದೆ ಇಂತಹ ಸಂವಿಧಾನವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಸಮರ್ಪಿಸುವುದು ಅವಶ್ಯವಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಚಿವರು ಮತ್ತು ಶಾಸಕರಾದ ರವಿಕುಮಾರ್ ಗೌಡ ಮತ್ತು ದಿನೇಶ್ ಗೂಳಿಗೌಡ ಹಾಗೂ ಕಾಂಗ್ರೆಸ್ ನಾಯಕ ಸ್ಟಾರ್ ಚಂದ್ರು ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago