ಮಂಡ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಸಮಾಜದ ಕ್ಷಮೆಯಾಚನೆ ಮಾಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ಆಗ್ರಹಿಸಿದರು.
ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ್ದು, ಎಲ್ಲ ರಾಜಕಾರಣಿಗಳು ಅವರ ಹೆಸರು ಬಳಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ. ಅಂತವರಲ್ಲಿ ಯತ್ನಾಳ್ ಕೂಡ ಒಬ್ಬರಾಗಿದ್ದು, ಅವರ ಹೇಳಿಕೆ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಎಂದು ಕಿಡಿ ಕಾರಿದರು.
ಒಂದು ಸಮುದಾಯದವನ್ನು ಮೆಚ್ಚಿಸಲು ವಿಶ್ವಗುರು ಎಂದು ಖ್ಯಾತಿ ಪಡೆದ ಬಸವಣ್ಣನವರ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸಮುದಾಯಕ್ಕೆ ಬೇಸರವುಂಟು ಮಾಡಿದ್ದು, ಯತ್ನಾಳ್ ಲಿಂಗಾಯತ ಸಮಾಜದ ಹಾಗೂ ಮನುಕುಲದ ಕ್ಷಮೆಯಾಚಿಸಬೇಕು. ತಮ್ಮ ಅವಿವೇಕತನವನ್ನು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ಕೆ.ಆರ್.ಪೇಟೆ ತಾ.ಅಧ್ಯಕ್ಷ ಸುಜೀಂದ್ರಕುಮಾರ್, ಪಾಂಡವಪುರ ತಾ.ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಜಯಣ್ಣ, ಮಂಡ್ಯ ತಾ.ಅಧ್ಯಕ್ಷ ಗುಳ್ಳಪ್ಪ, ಮಹದೇವಸ್ವಾಮಿ, ಹರೀಶ್ ಇದ್ದರು.
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…