ಮಂಡ್ಯ

ಕಾಂಗ್ರೆಸ್‌ ಶಾಸಕರಲ್ಲಿ ಅತೃಪ್ತಿಯ ಬೇಗುದಿ: ಎಚ್ .ಡಿ.ಕುಮಾರಸ್ವಾಮಿ

ಶಾಸಕರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ; ಎಚ್ .ಡಿ.ಕುಮಾರಸ್ವಾಮಿ ಭವಿಷ್ಯ

ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.

ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು.

ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು ಒಂದು ಅವಕಾಶ ಕೊಡುತ್ತಾರೆ ಸಿಗುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ. ನಾನು ಜ್ಯೋತಿಷ್ಯಗಾರನಲ್ಲ‌, ಆದರೂ ಹೇಳುತ್ತಿದ್ದೇನೆ ಎಂದರು ಸಚಿವರು.

ಜನ ಮತ್ತೆ ತೀರ್ಮಾನ ಮಾಡ್ತಾರೆ ಅನ್ನುವ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು‌? ನಾನು ಮುಖ್ಯಮಂತ್ರಿ ಸ್ಥಾನ ಐದು ವರ್ಷಗಳ ಸರ್ಕಾರ ಕೊಡಿ ಅಂತ ಜನತೆಗೆ ಈಗಲೂ ಮನವಿ ಮಾಡುತ್ತೇನೆ. ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಜನಪರ ಕಾರ್ಯಕ್ರಮಗಳ ಬಗ್ಗೆ ಜನ ಮರೆತಿಲ್ಲ ಎಂದರು ಅವರು.

ಕರ್ನಾಟಕ ಸಮೃದ್ಧಿಯ ನಾಡು. ಒಂದು ಅವಕಾಶ ಕೊಟ್ಟರೆ ನಾನು ಉತ್ತಮ ಕೆಲಸ ಮಾಡುತ್ತೇನೆ. ಯಾವ ಕುಟುಂಬವೂ ತಮ್ಮ ಬದುಕಿಗಾಗಿ ಕೈ ಒಡ್ಡುವ ಪರಿಸ್ಥಿತಿ ಬರಬಾರದು. ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಹಣ ಇವತ್ತು ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಿದರೆ ಇವರು ಕೊಡುವ 2 ಸಾವಿರ ಅಲ್ಲ, ಕನಿಷ್ಠ 10 ಸಾವಿರ ಸಂಪಾದನೆ ಮಾಡುವ ಕಾರ್ಯಕ್ರಮಗಳನ್ನು ಜಾರಿ ಮಾಡಬಹುದು. ಮುಂದೆ ಜನರು ಒಂದು ಅವಕಾಶ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ ಎಂದು ನಂಬಿದ್ದೇನೆ. ನಾನು ಜ್ಯೋತಿಷ್ಯಗಾರನಲ್ಲ‌, ಆಶಾವಾದಿ ಅಷ್ಟೇ. ಈ ಸರ್ಕಾರದ ನಡವಳಿಕೆಯ ಬಗ್ಗೆ ಜನರು ಬೇಸತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

50 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

1 hour ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

1 hour ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago